ಬಾಲಕಿಯ ಸಜೀವ ದಹನ 
ದೇಶ

ಮಾವು ಕದಿಯಲು ಬಂದವರ ತಡೆದ ಅಪ್ಪ; ಕದೀಮರಿಂದ ಮಗಳ ಸಜೀವ ದಹನ

ಮಾವು ಕದಿಯಲು ಬಂದ ಕಳ್ಳರನ್ನು ತಡೆದು ಓಡಿಸಿದ್ದರಿಂದ ಕೋಪಗೊಂಡ ಕದೀಮರು ತೋಟದ ಮಾಲೀಕನ ಮಗಳನ್ನೇ ಸಜೀವವಾಗಿ ಧಹಿಸಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ...

ಫತೇಪುರ್: ಮಾವು ಕದಿಯಲು ಬಂದ ಕಳ್ಳರನ್ನು ತಡೆದು ಓಡಿಸಿದ್ದರಿಂದ ಕೋಪಗೊಂಡ ಕದೀಮರು ತೋಟದ ಮಾಲೀಕನ ಮಗಳನ್ನೇ ಸಜೀವವಾಗಿ ಧಹಿಸಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಕೇಶಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಅಂದರ ಶನಿವಾರ ಅಕ್ಕಪಕ್ಕದ ಕೆಲ ನಿವಾಸಗಳ ಯುವಕರು ಶಿವಭೂಷಣ್ ಎಂಬುವವರ ಮಾವಿನ ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಮಾವು ಕದಿಯಲು ಪ್ರಯತ್ನಿಸಿದ್ದಾರೆ. ಆದರೆ ಇದಕ್ಕೆ ಅವಕಾಶ ಮಾಡಿಕೊಡದ ಶಿವಭೂಷಣ್ ಅವರು ಅವರನ್ನು ತಡೆದಿದ್ದಾರೆ. ಈ ವೇಳೆ ಶಿವಭೂಷಣ್ ಮತ್ತು ಮಾವು ಕದಿಯಲು ಬಂದಿದ್ದ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಘಟನೆಯಿಂದ ತೀವ್ರ ಆಕ್ರೋಶಗೊಂಡಿದ್ದ ಯುವಕರು ಭಾನುವಾರ ಬೆಳಗ್ಗೆ ಶಿವಭೂಷಣ್ ಅವರ ಮನೆಗೆ ನುಗ್ಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಶಿವಭೂಷಣ್ ತೋಟಕ್ಕೆ ಹೋಗಿದ್ದು, ಅವರ ಮನೆಯವರು ಸಂಬಂಧಿಕರ ಮದುವೆಗೆ ತೆರಳಿದ್ದಾರೆ. ಮನೆಯಲ್ಲಿ ಅವರ ಮಗಳು ಮಾತ್ರ ಇದ್ದು, ಏಕಾಂಗಿಯಾಗಿದ್ದ ಪುತ್ರಿಯನ್ನು ಕದೀಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ದುಷ್ಕರ್ಮಿಗಳು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಿಸಲು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಾಕಿದ್ದಾರೆ ಎಂದು ಶಿವಭೂಷಣ್ ಹೇಳಿದ್ದಾರೆ. ಪ್ರಕರಣದಿಂದ ಇಡೀ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಸ್ತುತ ಕೇಶಾನ್ ಗ್ರಾಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ದುಷ್ಕರ್ಮಿಗಳ ವಿರುದ್ಧ ತಂದೆ ಶಿವಭೂಷಣ್ ಅವರು ದೂರು ದಾಖಲಿಸಿದ್ದು, ದುಷ್ಕರ್ಮಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 452 (ಹಲ್ಲೆ ನಡೆಸಲೆಂದೇ ಮನೆ ಮೇಲೆ ದಾಳಿ) ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವುದಾಗಿ ಕೇಶಾನ್ ಎಸ್ ಪಿ ಅನೀಸ್ ಅಹ್ಮದ್ ಅನ್ಸಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT