ಬಾನ್ ಕೀ ಮೂನ್ 
ದೇಶ

ಯೋಗದ ಮಹತ್ವ ಸಾರಿದ ವಿಶ್ವಸಂಸ್ಥೆ ಕಾರ್ಯದರ್ಶಿ ಬಾನ್ ಕೀ ಮೂನ್

ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತದ ಪುರಾತನ ಯೋಗ ಪದ್ಧತಿ ಕುರಿತಂತೆ ವಿಶ್ವಸಂಸ್ಥೆ ಮಹಾ...

ನವದೆಹಲಿ: ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತದ ಪುರಾತನ ಯೋಗ ಪದ್ಧತಿ ಕುರಿತಂತೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಬಾನ್ ಕೀ ಮೂನ್ ಅವರು ಯೋಗ ಎಂಬುದು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತದೆ ಎಂದಿದ್ದಾರೆ.

ಯೋಗ ಮಾಡುವ ಮೂಲಕ ದೈಹಿಕ ಆರೋಗ್ಯ ಹಾಗೂ ಮನಸ್ಥಿತಿ ಸುಧಾರಿಸುತ್ತದೆ ಹೀಗಾಗಿ ಇದರಲ್ಲಿ ಧರ್ಮ ರಾಜಕೀಯ ಬೇಡ ಯೋಗ ಕುರಿತು ತಾರತಮ್ಯ ಸರಿಯಲ್ಲ ಎಂದಿರುವ ಬಾನ್ ಕೀ ಮೂನ್ ಹೇಳಿದ್ದಾರೆ. ಅಲ್ಲದೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವೊಂದು ಯೋಗಾಸನ ಮಾಡಿದ್ದು ಅದರಿಂದ ನನಗೆ ತೃಪ್ತಿ ಸಿಕ್ಕಿದ್ದು, ಯೋಗವನ್ನು ಯಾರು ಬೇಕಾದರೂ ಮಾಡಬಹುದು ಇದಕ್ಕೆ ಯಾವುದೇ ಧರ್ಮದ ಕಟ್ಟುಪಾಡುಗಳಿಲ್ಲ ಎಂದು ತಿಳಿಸಿದ್ದಾರೆ.

ಯೋಗ ಎಂಬುದು ಯಾವುದೇ ತಾರತಮ್ಯ ಸೃಷ್ಟಿಸುವುದಿಲ್ಲ, ವಯಸ್ಸು, ಸಾಮರ್ಥ್ಯದ ಭೇದವಿಲ್ಲದಂತೆ ಎಲ್ಲರೂ ಯೋಗ ತರಬೇತಿ ಪಡೆಯಬಹುದಾಗಿದ್ದು  ನನ್ನ ಮೊದಲ ಆಸನದಲ್ಲೇ ಯೋಗದ ಮಹತ್ವವನ್ನ ಅರಿತಿದ್ದೇನೆ ಎಂದಿರುವ ಮೂನ್  ಮೊದಲ ಬಾರಿ ಯೋಗ ಕಲಿಯುತ್ತಿರುವವರಿಗೆ ವೃಕ್ಷಾಸನ ಉತ್ತಮವಾದದ್ದು ಎಂಬ ಕಿವಿಮಾತನ್ನು ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT