ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್ ಪೊಲೀಸ್ ಎನ್‌ಕೌಂಟರ್‌ಗೆ ಅಕಾಲಿ ದಳದ ನಾಯಕ ಬಲಿ

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ಅಮೃತಸರ: ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮುಖಾ  ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಅಕಾಲಿ ದಳದ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ನಡೆಸಿದ ಎನ್ ಕೌಂಟರ್ ನಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ತಮಗೆ ಬಂದ ಮಾಹಿತಿಯೊಂದರ ಪ್ರಕಾರ, ನಂಬರ್ ಪ್ಲೇಟ್ ಹೊಂದಿಲ್ಲದ ಐ20 ಕಾರಿನಲ್ಲಿ ಕ್ರಿಮಿನಲ್ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆ ಪ್ರಕಾರ ಪೊಲೀಸರು ತಪಾಸಣೆ ಹೋದಾಗ ಮುಖಾ ಕೂಡಾ ಗುಂಡಿನ ದಾಳಿ ನಡೆಸಿದ್ದರು. ಆಗ ನಡೆಸಿದ ಪ್ರತಿದಾಳಿಯಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ವಾರ್ಡ್ ನಂ16ರ ಯುವ ಅಕಾಲಿದಳದ ಇನ್ ಚಾರ್ಜ್ ಆಗಿದ್ದ ಮುಖಾ ಅವರನ್ನು ಪೊಲೀಸರು ವ್ಯವಸ್ಥಿತವಾಗಿ ಹತ್ಯೆಗೈದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT