ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್ ಪೊಲೀಸ್ ಎನ್‌ಕೌಂಟರ್‌ಗೆ ಅಕಾಲಿ ದಳದ ನಾಯಕ ಬಲಿ

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ಅಮೃತಸರ: ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮುಖಾ  ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಅಕಾಲಿ ದಳದ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ನಡೆಸಿದ ಎನ್ ಕೌಂಟರ್ ನಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ತಮಗೆ ಬಂದ ಮಾಹಿತಿಯೊಂದರ ಪ್ರಕಾರ, ನಂಬರ್ ಪ್ಲೇಟ್ ಹೊಂದಿಲ್ಲದ ಐ20 ಕಾರಿನಲ್ಲಿ ಕ್ರಿಮಿನಲ್ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆ ಪ್ರಕಾರ ಪೊಲೀಸರು ತಪಾಸಣೆ ಹೋದಾಗ ಮುಖಾ ಕೂಡಾ ಗುಂಡಿನ ದಾಳಿ ನಡೆಸಿದ್ದರು. ಆಗ ನಡೆಸಿದ ಪ್ರತಿದಾಳಿಯಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ವಾರ್ಡ್ ನಂ16ರ ಯುವ ಅಕಾಲಿದಳದ ಇನ್ ಚಾರ್ಜ್ ಆಗಿದ್ದ ಮುಖಾ ಅವರನ್ನು ಪೊಲೀಸರು ವ್ಯವಸ್ಥಿತವಾಗಿ ಹತ್ಯೆಗೈದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ, ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

Cricket: ಚೆಂಡು ವಿರೂಪ ಪ್ರಕರಣ, ಪಾಕ್ ಆಟಗಾರ Fakhar Zamanಗೆ ನಿಷೇಧ: PCB ಮಾಹಿತಿ

SCROLL FOR NEXT