ಅಜಿತ್ ದೋವಲ್ 
ದೇಶ

ಅಜಿತ್ ದೋವಲ್ -ಮಯನ್ಮಾರ್ ಅಧ್ಯಕ್ಷರ ಭೇಟಿ: ಭದ್ರತಾ ಸಹಕಾರ ವೃದ್ಧಿ ಬಗ್ಗೆ ಚರ್ಚೆ

ಅಜಿತ್ ದೋವಲ್, ಮಯಾನ್ಮಾರ್ ಅಧ್ಯಕ್ಷ ಥೈನ್‌ ಸೈನ್‌ ಹಾಗೂ ಅಲ್ಲಿನ ರಕ್ಷಣಾ ಇಲಾಖೆ ಮುಖ್ಯಸ್ಥರನ್ನು ಭೇಟಿ ಮಾಡಿದ್ದು ಭದ್ರತಾ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮಯಾನ್ಮಾರ್ ಅಧ್ಯಕ್ಷ  ಥೈನ್‌ ಸೈನ್‌ ಹಾಗೂ ಅಲ್ಲಿನ ರಕ್ಷಣಾ ಇಲಾಖೆ ಮುಖ್ಯಸ್ಥರನ್ನು ಭೇಟಿ ಮಾಡಿದ್ದು ಭದ್ರತಾ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಭಾರತ- ಮಯನ್ಮಾರ್ ಗಡಿ ಭಾಗದಲ್ಲಿದ್ದ ಉರ್ಗರ ವಿರುದ್ಧ ಕಾರ್ಯಾಚರಣೆ ನಡೆಸಿದ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಯನ್ಮಾರ್ ಗೆ ಭೇಟಿ ನೀಡಿದ್ದು ಯಶಸ್ವೀ ಮಾತುಕತೆ ನಡೆಸಿದ್ದಾರೆ.  ವಿದೇಶಾಂಗ ಕಾರ್ಯದರ್ಶಿ ಎಸ್.ಜೈ ಶಂಕರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಗಡಿ ಪ್ರದೇಶದಲ್ಲಿ ಭದ್ರತಾ ಸಹಕಾರ ವೃದ್ಧಿ ಬಗ್ಗೆ ಮಹತ್ವದ ಮಾತುಕತೆ ನಡೆದಿದ್ದು ಈಶಾನ್ಯ ಪ್ರದೇಶದಲ್ಲಿರುವ ಭಯೋತ್ಪಾದಕರ ವಿರುದ್ಧ ಮುಂದಿನ ಜಂಟಿ ಕಾರ್ಯಾಚರಣೆ ನಡೆಸುವ ಬಗ್ಗೆಯೂ ಚರ್ಚೆ ನಡೆದಿದೆ.  

ಮಯನ್ಮಾರ್ ಗಡಿ ಪ್ರದೇಶದಲ್ಲಿ ಜು.9 ರಂದು ಉಗ್ರರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲೂ ಅಜಿತ್ ದೋವಲ್ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಸರ್ಕಾರ ಈಶಾನ್ಯ ಭಾಗದಲ್ಲಿ ಭಯೋತ್ಪಾದಕರ ವಿರುದ್ಧ ಮತ್ತಷ್ಟು ಸೇನಾ ಕಾರ್ಯಾಚರಣೆ ನಡೆಸಲು ಯೋಜನೆ  ರೂಪಿಸಿದೆ. ಈ ಹಿನ್ನೆಲೆಯಲ್ಲಿ ಮಯನ್ಮಾರ್ ಗೆ  ಅಜಿತ್ ದೋವಲ್ ಭೇಟಿ ಮಹತ್ವ ಪಡೆದುಕೊಂಡಿದೆ. ಗಡಿ ಸಹಕಾರಕ್ಕೆ ಸಂಬಂಧಿಸಿದಂತೆ  ಕಳೆದ ವರ್ಷ ಮಯನ್ಮಾರ್ ನೊಂದಿಗೆ ಮಾತುಕತೆ ನಡೆಸಿದ್ದ ಭಾರತ ಸರ್ಕಾರ ಗಡಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿಹಾಕಿತ್ತು. ಇದರಿಂದಾಗಿ ಭದ್ರತಾ ಸಹಕಾರ ಮತ್ತು ಎರಡು ದೇಶಗಳ ಭದ್ರತಾ ಸಂಸ್ಥೆಗಳ ನಡುವೆ ಮಾಹಿತಿ ವಿನಿಮಯಕ್ಕೆ ಪರಿಣಾಮಕಾರಿಯಾಗಿದೆ. ಈ ಪ್ರಕ್ರಿಯೆಯಲ್ಲೂ ಅಜಿತ್ ದೋವಲ್ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT