4 ವಾರದಲ್ಲಿ ಮರುಪರೀಕ್ಷೆ ನಡೆಸಲು ಸಾಧ್ಯವಿಲ್ಲ: ಸಿಬಿಎಸ್ ಸಿ (ಸಾಂದರ್ಭಿಕ ಚಿತ್ರ) 
ದೇಶ

4 ವಾರದಲ್ಲಿ ಮರುಪರೀಕ್ಷೆ ನಡೆಸಲು ಸಾಧ್ಯವಿಲ್ಲ: ಸಿಬಿಎಸ್ ಸಿ

ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆಯನ್ನು 4 ನಾಲ್ಕು ವಾರದಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಸಿಬಿಎಸ್ ಸಿ ಆಡಳಿತ ಮಂಡಳಿ ಗುರುವಾರ ಹೇಳಿದೆ...

ನವದೆಹಲಿ: ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆಯನ್ನು 4 ನಾಲ್ಕು ವಾರದಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಸಿಬಿಎಸ್ ಸಿ ಆಡಳಿತ ಮಂಡಳಿ ಗುರುವಾರ ಹೇಳಿದೆ.

ಮೇ. 3 ರಂದು ನಡೆದ ಅಖಿಲ ಭಾರತ ವೈದ್ಯಕೀಯ ಪೂರ್ವ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಸುಪ್ರೀಂಕೋರ್ಟ್ ನಾಲ್ಕು ವಾರಗಳಲ್ಲಿ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವಂತೆ ಸೋಮವಾರ ಸಿಬಿಎಸ್ ಸಿ ಗೆ ಆದೇಶ ನೀಡಿತ್ತು.

ಈ ಆದೇಶವನ್ನು ತಿರಸ್ಕರಿಸಿರುವ ಸಿಬಿಎಸ್ ಸಿ ಆಡಳಿತ ಮಂಡಳಿಯು ನಾಲ್ಕು ವಾರದಲ್ಲಿ ಮರುಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಆಡಳಿತ ಮಂಡಳಿಯು ಈಗಾಗಲೇ ನಿರಂತರವಾಗಿ 7 ಪರೀಕ್ಷೆಗಳನ್ನು ನಡೆಸಿದೆ. ಇದೀಗ ವೈದ್ಯಕೀಯ ಪೂರ್ವ ಪ್ರವೇಶ ಮರು ಪರೀಕ್ಷೆಯನ್ನು ನಾಲ್ಕುವಾರದೊಳಗಾಗಿ ಮಾಡಲು ಸಾಧ್ಯವಾಗುವುದಿಲ್ಲ. ಮರುಪರೀಕ್ಷೆ ಮಾಡಲು ಕನಿಷ್ಟ ಎಂದರೂ 3 ತಿಂಗಳು ಬೇಕು ಎಂದು ಹೇಳಿದೆ.

ಮೇ 3 ರಂದು ನಡೆದ ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆ (ಎಐಪಿಎಂಟಿ)ಯ ಪ್ರಶ್ನೆ ಪತ್ರಿಕೆಗಳು ಬಿಹಾರ, ಜಾರ್ಖಂಡ್, ರಾಜಸ್ಥಾನ, ಹರಿಯಾಣ ಸೇರಿದಂತೆ ಇನ್ನಿತರೆ ರಾಜ್ಯಗಳಲ್ಲಿ ಮೊಬೈಲ್ ಮೂಲಕ ಬಹಿರಂಗವಾಗಿದ್ದವು. ಪ್ರಕರಣದ ಅರ್ಜಿದಾರರಲ್ಲೊಬ್ಬರಾದ ಪ್ರಶಾಂತ್‌ ಭೂಷಣ್‌ ಫ‌ಲಾನುಭವಿಗಳನ್ನು ಕಂಡುಹಿಡಿಯುವುದು ಕಷ್ಟಕರವಾದ್ದರಿಂದ ಮರುಪರೀಕ್ಷೆ ನಡೆಸುವುದೇ ಒಳಿತು ಎಂದು ಸಲಹೆ ನೀಡಿದ್ದರು.

ಸಿಬಿಎಸ್ಇ ಜೂನ್ 5 ರಂದು ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಬೇಕಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾದ್ದರಿಂದ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಮಾಧ್ಯಮಿಕ ಶಿಕ್ಷಣದ ಕೇಂದ್ರೀಯ ಮಂಡಳಿಗೆ ಸೂಚನೆ ನೀಡಿತ್ತು. ಪ್ರಕರಣದ ತನಿಖೆ ಅಧಿಕ ಸಮಯ ತೆಗೆದುಕೊಳ್ಳಲಿದ್ದು, ಇದರಿಂದಾಗಿ ವಿದ್ಯಾರ್ಥಿಗಳ ಪರಿಣಾಮ ಬೀರುತ್ತದೆ ಎಂದು ತನ್ನ ಅನಿಸಿಕೆ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಜೂ.15 ರಂದು ಪರೀಕ್ಷೆಯನ್ನೇ ರದ್ದುಗೊಳಿಸಿ ಮರು ಪರೀಕ್ಷೆ ನಡೆಸುವಂತೆ ಸಿಬಿಎಸ್ ಸಿ ಆಡಳಿತ ಮಂಡಳಿಗೆ ಆದೇಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT