ಯೋಗೇಂದ್ರ ಯಾದವ್ 
ದೇಶ

ನಕಲಿ ಪ್ರಮಾಣ ಪತ್ರದ ಬಗ್ಗೆ ಕೇಜ್ರಿಗೆ ಮೊದಲೇ ಮಾಹಿತಿ ಇತ್ತು: ಯೋಗೇಂದ್ರ ಯಾದವ್

ಜಿತೇಂದ್ರ ತೋಮರ್ ನಕಲಿ ಪ್ರಮಾಣ ಪತ್ರದ ಬಗ್ಗೆ ಚುನಾವಣೆಗೂ ಮುನ್ನವೇ ದೆಹಲಿ ಮುಖ್ಯಮಂತ್ರಿ ಕೇಜ್ರವಾಲ್ ಅವರಿಗೆ ಮಾಹಿತಿ ಇತ್ತು ಎಂದು ಆಮ್ ಆದ್ಮಿ ಪಕ್ಷದ ಉಚ್ಚಾಟಿತ ನಾಯಕ...

ಚೆನ್ನೈ: ಜಿತೇಂದ್ರ ತೋಮರ್ ನಕಲಿ ಪ್ರಮಾಣ ಪತ್ರದ ಬಗ್ಗೆ ಚುನಾವಣೆಗೂ ಮುನ್ನವೇ ದೆಹಲಿ ಮುಖ್ಯಮಂತ್ರಿ ಕೇಜ್ರವಾಲ್ ಅವರಿಗೆ ಮಾಹಿತಿ ಇತ್ತು ಎಂದು ಆಮ್ ಆದ್ಮಿ ಪಕ್ಷದ ಉಚ್ಚಾಟಿತ ನಾಯಕ ಯೋಗೇಂದ್ರ ಯಾದವ್ ಅವರು ಗುರುವಾರ ಹೇಳಿದ್ದಾರೆ.

ಚೆನ್ನೈನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, 2015 ದೆಹಲಿ ಚುನಾವಣೆಗೂ ಮುನ್ನವೇ ತೋಮರ್ ಅವರ ನಕಲಿ ಪ್ರಮಾಣ ಪತ್ರದ ಬಗ್ಗೆ ಕೇಜ್ರಿವಾಲ್ ಗೆ ಗೊತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪಕ್ಷದ ನಾಯಕರು ಇದನ್ನು ವಿರೋಧಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದೆವು. ಆದರೆ, ಅಂದು ಕೇಜ್ರಿವಾಲ್ ಈ ಬಗ್ಗೆ ಆಸಕ್ತಿ ತೋರಿಸಿರಲಿಲ್ಲ. ತೋಮರ್ ನಕಲಿ ಪ್ರಮಾಣ ಪತ್ರ ಬಹಿರಂಗ ಪ್ರಕರಣವನ್ನು ಈ ಮೊದಲೇ ನಿರೀಕ್ಷಿಸಲಾಗಿತ್ತು ಎಂದು ಹೇಳಿದ್ದಾರೆ.

ಇದೇ ವೇಳೆ ಕೇಜ್ರಿವಾಲ್ ಆಂಗ್ಲ ಮಾಧ್ಯಮಗಳಲ್ಲಿ ಹಿಂದಿ ಮಾತನಾಡುವುದರ ಕುರಿತಂತೆ ಮಾತನಾಡಿರುವ ಅವರು, ಕೇಜ್ರಿವಾಲ್ ಅವರು ಕೂಡಲೇ ಆಂಗ್ಲ ಮಾಧ್ಯಮಗಳಲ್ಲಿ ಹಿಂದಿ ಮಾತನಾಡುವುದನ್ನು ಬಿಟ್ಟುಬಿಡಬೇಕು. ಒಬ್ಬ ನಾಯಕನಾದವನು ಯಾವಾಗಲೂ ಕೇಂದ್ರೀಕೃತ ನಾಯಕನಾಗಿರಬೇಕು. ವಿಶಾಲದಾಯಿಯಾಗಿರಬೇಕು. ಪಕ್ಷದಲ್ಲಿ ಸ್ಥಳೀಯ ನಾಯಕರ ಅವಶ್ಯಕತೆ ಇದೆ. ಒಬ್ಬ ಸಾಮಾನ್ಯ ವ್ಯಕ್ತಿ ಕನಿಷ್ಟ ಎಂದರೂ ಒಂದು ವರ್ಷವಾದರೂ ಅಧಿಕಾರವನ್ನು ನಡೆಸಬಲ್ಲ. ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ಉತ್ತಮ ಆಡಳಿತ ನಡೆಸಲಿದೆ ಎಂದು ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರದಿಂದ ನಮ್ಮ ಪಕ್ಷ ಜನಪ್ರಿಯತೆ ಕಳೆದುಕೊಳ್ಳುತ್ತಿದೆ ಎಂಬ ಹೇಳಿಕೆಗಳು ತಪ್ಪು, ಒಂದು ವರ್ಷದ ಆಡಳಿತದಿಂದ ಒಂದು ಸರ್ಕಾರ ಹೀಗೆ ಇದೆ, ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಯೋಗೇಂದ್ರ ಯಾದವ್ ಅವರು, ರಾಜಕೀಯ ರಂಗಕ್ಕೆ ಮತ್ತೆ ಇಳಿಯುವುದಾಗಿ ತಿಳಿಸಿದ್ದಾರೆ. ಜೈ ಕಿಸಾನ್ ಅಭಿಯಾನ ಇದೀಗ ರೈತರಿಗೆ ಉಪಯೋಗವಾಗುತ್ತಿದ್ದು, 1 ಹಳ್ಳಿಗರಿಗೆ ತಲುಪಿಸಲು ತಂಡ ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ.

ನಂತರ ಭೂ ಕಾಯ್ದೆ ತಿದ್ದುಪಡಿ ಕುರಿತಂತೆ ಮಾತನಾಡಿರುವ, ತಿದ್ದುಪಡಿ ಕಾಯ್ದೆ ಸಮಸ್ಯೆ ಕೇವಲ ಒಂದು ಭಾಗದ ಸಮಸ್ಯೆಯಷ್ಟೇ. ನಿಜವಾದ ಸಮಸ್ಯೆ ಇರುವುದು ಆರ್ಥಿಕ ಹಾಗೂ ಪರಿಸರ ವಲಯದಲ್ಲಿ. ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿಯಾಗುತ್ತಿದ್ದು, ಲಾಭಕ್ಕಿಂತ ನಷ್ಟಗಳೇ ಹೆಚ್ಚಾಗುತ್ತಿದೆ. ಮೊದಲು ಸಂತ್ರಸ್ಥ ರೈತರಿಗೆ ಸಾಮಾನ್ಯ ಪರಿಹಾರ ಹಣಕ್ಕಾಗಿ ಹೋರಾಟ ನಡೆಸಬೇಕಿದೆ. ಈ ಕುರಿತ ಹೋರಾಟವನ್ನು ಆಗಸ್ಟ್ 10 ರಂದು ನಡೆಯಲಿರುವ ಸಂಸತ್ ನ ಜಂಟಿ ಅಧಿವೇಶನದ ಸಂದರ್ಭದಲ್ಲಿ ನಡೆಸಲಾಗುವುದು ಎಂದಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT