ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿಯ ಬಂಧನ ( ಸಾಂದರ್ಭಿಕ ಚಿತ್ರ) 
ದೇಶ

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

72 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬುಧವಾರ ಬಂಧಿಸಲಾಗಿದೆ...

ಕೋಲ್ಕತಾ: 72 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬುಧವಾರ ಬಂಧಿಸಲಾಗಿದೆ.

ಬಂಧಿತ ಆರೋಪಿ ಬಾಂಗ್ಲಾದೇಶದ ನಜ್ರುಲ್ ಎಂದು ಗುರ್ತಿಸಲಾಗಿದ್ದು, ಘಟನೆ ನಡೆದ ನಂತರ ಆರೋಪಿ ಬಾಂಗ್ಲಾದೇಶದ ಗಡಿ ಭಾಗದಲ್ಲಿ ತಲೆಮರೆಸಿಕೊಂಡಿದ್ದು, ನಂತರ ಸ್ಥಳೀಯ ಪೊಲೀಸರು ಆತನನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ಆರೋಪಿ ನಂತರ ಭಾರತದ ಒಳಗೆ ಬಂದು ಮತ್ತೆ ತಲೆಮರಿಸಿಕೊಂಡಿದ್ದ. ನಂತರ ವಿದೇಶಕ್ಕೆ ಹಾರಲು ಆರೋಪಿ ಯತ್ನಿಸುತ್ತಿರುವುದು ತನಿಖಾ ತಂಡದ ಗಮನಕ್ಕೆ ಬಂದಿತು. ಖಚಿತ ಮಾಹಿತಿ ಆಧಾರದ ಮೇಲೆ ಇಂದು ಕೋಲ್ಕತಾದ ಸೇಲ್ಡಹ್' ರೈಲು ನಿಲ್ದಾಣಕ್ಕೆ ತನಿಖಾ ತಂಡ ಭೇಟಿ ನೀಡಿದಾಗ ಆರೋಪಿ ಸಿಕ್ಕಿಹಾಕಿಕೊಂಡ, ಪ್ರಸ್ತುತ ಆರೋಪಿಯನ್ನು ಬಂಧಿನದಲ್ಲಿರಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಿತ್ತರಂಜನ್ ನಾಗ್ ಹೇಳಿದ್ದಾರೆ.

ಮಾರ್ಚ್ 14 ರಂದು ನಾಡಿಯಾ ಜಿಲ್ಲೆಯ ಗಂಗ್ನಾಪುರದಲ್ಲಿರುವ ಕಾನ್ವೆಂಟ್ ಗೆ ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಒಳ ನುಗ್ಗಿದ ರೌಡಿಗಳು ಹಣ ದೋಚಲು ಮುಂದಾಗಿದ್ದಾರೆ. ಈ ವೇಳೆ ರೌಡಿಗಳನ್ನು ಕಂಡ ಸನ್ಯಾಸಿನಿ ಹಣದೋಚಲು ಬಿಡದೆ ತಡೆವೊಡ್ಡಿದ್ದಾರೆ. ಸನ್ಯಾಸಿನಿಯ ವರ್ತನೆಯಿಂದ ತೀವ್ರ ಕೆಂಡಾಮಂಡಲವಾದ ರೌಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ನಂತರ ಸ್ಥಳದಲ್ಲಿ ಅಲ್ಮೆರಾದಲ್ಲಿದ್ದ ಹಣ ದೋಚಿ ಸ್ಥಳದಿಂದ ಪರಾರಿಯಾಗಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ಸಂಬಂಧ ಏ.1ರಂದು ಲೂಧಿಯಾನಾ ಪೊಲೀಸರು ನಾಲ್ವರು ಶಂಕಿತ ಬಾಂಗ್ಲಾದೇಶಿಗರನ್ನು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT