ಕೆಎಸ್ಒಯು(ಸಾಂದರ್ಭಿಕ ಚಿತ್ರ ) 
ದೇಶ

ಯುಜಿಸಿಯಿಂದ ಕೆಎಸ್ಒಯು ಕೋರ್ಸ್ ಗಳ ಮಾನ್ಯತೆ ರದ್ದು

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ಒಯು)ದ ಮಾನ್ಯತೆಯನ್ನು ರದ್ದುಗೊಳಿಸಿದೆ.

ಬೆಂಗಳೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ಒಯು)ದ ಮಾನ್ಯತೆಯನ್ನು ರದ್ದುಗೊಳಿಸಿದೆ.

ದೂರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯುಜಿಸಿಯ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ 2012 -2013 ರ ನಂತರದ ಮುಕ್ತ ವಿಶ್ವವಿದ್ಯಾನಿಲಯದ ಎಲ್ಲಾ ಕೋರ್ಸ್ ಗಳ ಮಾನ್ಯತೆ ರದ್ದುಗೊಳಿಸಲಾಗಿದೆ ಎಂದು ಯುಜಿಸಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ವಿದ್ಯಾರ್ಥಿಗಳು ಕೆ.ಎಸ್.ಒ.ಯು ವಿವಿಯಲ್ಲಿ 2012 -13 ನಂತರದ ಯಾವುದೇ ವೃತ್ತಿಪರ/ ತಾಂತ್ರಿಕ ಕೋರ್ಸ್ ಗಳಿಗೂ ನೋಂದಣಿ ಮಾಡದಂತೆ ಯು.ಜಿ.ಸಿ ಎಚ್ಚರಿಕೆ ನೀಡಿದೆ. ವಿಶ್ವವಿದ್ಯಾನಿಲಯದ ಮಾನ್ಯತೆ ರದ್ದುಗೊಂಡಿರುವುದನ್ನು ಸ್ಪಷ್ಟಪಡಿಸಿರುವ ವಿವಿಯ ಕುಲಪತಿ ಪ್ರೊ. ಎಂ.ಜಿ ಕೃಷ್ಣನ್, ಮಾನ್ಯತೆ ರದ್ದುಗೊಡಿರುವುದರಿಂದ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ, ಯುಜಿಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ವಿಶ್ವವಿದ್ಯಾನಿಲಯದ ಮಾನ್ಯತೆ ರದ್ದುಗೊಂಡಿರುವುದರಿಂದ ವಿವಿಯಲ್ಲಿ ದೂರಶಿಕ್ಷಣ ಪಡೆಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT