ವಸುಂಧರ ರಾಜೇ 
ದೇಶ

ವಸುಂಧರ ರಾಜೇ ಸಹಾಯಕ್ಕೆ ಬರದ ಬಿಜೆಪಿ, ಮೋದಿ

ವಿದೇಶಾಂಗ ಸಚಿವೆ ಆಯ್ತು, ಈಗ ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೇ ಅವರನ್ನು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ....

ನವದೆಹಲಿ: ವಿದೇಶಾಂಗ ಸಚಿವೆ ಆಯ್ತು, ಈಗ ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೇ ಅವರನ್ನು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಜತೆಗಿನ ಆತ್ಮೀಯತೆ ಮತ್ತಷ್ಟು ಸಂಕಷ್ಟಕ್ಕೆ ತಳ್ಳುವುದು ಸ್ಪಷ್ಟವಾಗಿದೆ.

ಈ ನಡುವೆ ಸುಷ್ಮಾ ಸ್ವರಾಜ್ ಅವರ ರಕ್ಷಣೆಗೆ ಪ್ರಧಾನಿ ಮೋದಿ ಅವರ ಸಂಪುಟವೇ ಧಾವಿಸಿದ್ದರೂ ರಾಜೇ ವಿಚಾರದಲ್ಲಿ ಮಾತ್ರ ಬಿಜೆಪಿ ಎಚ್ಚರಿಕೆಯ ನಡೆ ಇಡಲು ನಿರ್ಧರಿಸಿದೆ. ಇನ್ನಷ್ಟು ಸತ್ಯ ಹೊರಬೀಳುವವರೆಗೆ ರಾಜೇ ಅವರನ್ನು ಸಮರ್ಥಿಸಿಕೊಳ್ಳುವಂತಹ ಹೇಳಿಕೆ ನೀಡಬಾರದು ಎಂದು ಪಕ್ಷದ ವರಿಷ್ಠರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸ್ವತಃ ರಾಜೇ ಅವರಿಗೂ ಬಿಜೆಪಿ ಸೂಚಿಸಿದೆ ಎಂದು ವರದಿ ಮಾಡಲಾಗಿದೆ.

ಇನ್ನು ರಾಜೇ ಅವರ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಹೇಳಿದರು.

ಈ ಮಧ್ಯೆ, ಲಲಿತ್ ಮೋದಿ ಅವರ ಜತೆಗಿನ ಮತ್ತಷ್ಟು ಮಾಹಿತಿ ಬಹಿರಂಗವಾಗುತ್ತಿದ್ದಂತೆ ಆತಂಕಗೊಂಡಿರುವ ರಾಜೇ ಅವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ದಿಢೀರ್ ಭೇಟಿ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT