ಅರವಿಂದ್ ಕೇಜ್ರಿವಾಲ್- ಅಡ್ವಾಣಿ(ಸಾಂದರ್ಭಿಕ ಚಿತ್ರ) 
ದೇಶ

'ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ' ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ - ಅಡ್ವಾಣಿ ಭೇಟಿ

ತುರ್ತು ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂಬ ಅಡ್ವಾಣಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂ.19 ರಂದು ಅಡ್ವಾಣಿ ಅವರನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ: ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂಬ ಅಡ್ವಾಣಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂ.19 ರಂದು ಅಡ್ವಾಣಿ ಅವರನ್ನು ಭೇಟಿ ಮಾಡಲಿದ್ದಾರೆ.

ದೆಹಲಿಯಲ್ಲಿರುವ ಅಡ್ವಾಣಿ ನಿವಾಸಕ್ಕೆ ಸಂಜೆ 6 ಗಂಟೆ ವೇಳೆಗೆ ಭೇಟಿ ನೀಡಲಿರುವ ಅರವಿಂದ್ ಕೇಜ್ರಿವಾಲ್, ಅಡ್ವಾಣಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಅಡ್ವಾಣಿ ಮತ್ತೆ ತುರ್ತು ಪರಿಸ್ಥಿತಿ ಎದುರಾಗುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ಭೇಟಿ ಮಾಡಲು ಕೇಜ್ರಿವಾಲ್ ತುದಿಗಾಲಲ್ಲಿ ನಿಂತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ್ದ ವಿಶೇಷ ಸಂದರ್ಶನದಲ್ಲಿ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾತನಾಡಿದ್ದ ಅಡ್ವಾಣಿ, ದೇಶದಲ್ಲಿ ಮತ್ತೆ  ತುರ್ತು ಪರಿಸ್ಥಿತಿ ಎದುರಿಸುವಂತಹ ಸ್ಥಿತಿ ಬಂದ್ರೂ ಬರಬಹುದು. ಅದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದರು. ಅಡ್ವಾಣಿ ಹೇಳಿಕೆಗೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅಡ್ವಾಣಿ ಹೇಳಿಕೆ ಸರಿಯಾಗಿದೆ, ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಬಂದರೂ ಬರಬಹುದು, ಆದರೆ ಇದರ ಮೊದಲ ಪ್ರಯೋಹ್ಗ ದೆಹಲಿಯಲ್ಲಿ ನಡೆಯಲಿದೆಯೇ ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT