ಕಳ್ಳಭಟ್ಟಿ ದುರಂತ: 53 ಸಾವು (ಸಾಂದರ್ಭಿಕ ಚಿತ್ರ) 
ದೇಶ

ಕಳ್ಳಭಟ್ಟಿ ದುರಂತ: 53 ಸಾವು

ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ ಶುಕ್ರ ವಾರ 53ಕ್ಕೇರಿದೆ. ಇನ್ನೂ 20 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಘಟನೆ ಸಂಬಂಧ ಎಂಟು ಪೊಲೀಸರನ್ನು ಸರ್ಕಾರ ಅಮಾನತು ಮಾಡಿದೆ...

ಮುಂಬೈ: ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ ಶುಕ್ರ ವಾರ 53ಕ್ಕೇರಿದೆ. ಇನ್ನೂ 20 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಘಟನೆ ಸಂಬಂಧ ಎಂಟು ಪೊಲೀಸರನ್ನು ಸರ್ಕಾರ ಅಮಾನತು ಮಾಡಿದೆ.

ಮಲಾಡ್‍ನ ಲಕ್ಷ್ಮಿ ನಗರ ಸ್ಲಮ್ ಪ್ರದೇಶದ ಸಮೀಪ ಇರುವ ಗಾಮ್ದೇವಿ ಜುರಾಸಿಕ್ ಪಾರ್ಕ್‍ನಲ್ಲಿ ಗುರುವಾರ ರಾತ್ರಿ ಕಳ್ಳಭಟ್ಟಿ ವಿತರಿಸಲಾಗಿತ್ತು. ಈ ವೇಳೆ ಅಸ್ವಸ್ಥರಾದ 13 ಮಂದಿ ರಾತ್ರಿಯೇ ಮೃತಪಟ್ಟಿದ್ದರು. ಶುಕ್ರವಾರ ಸಂಜೆ ವೇಳೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೆ 40 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿಲಕ್ಷ್ಯ ತೋರಿದ ಕಾರಣ ಮಾಲ್ವಾನಿ ಠಾಣೆಯ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಏಳು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಇದಲ್ಲದೆ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನೂ ಬಂಧಿಸಲಾಗಿದೆ. ಇವರು ಕಳ್ಳಭಟ್ಟಿಯನ್ನು
ಠಾಣೆಯಿಂದ ವಸಂತ್ ವಿಹಾರ್ ಪ್ರದೇಶಕ್ಕೆ ಸಾಗಣೆ ಮಾಡಿದ್ದರು. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಏತನ್ಮಧ್ಯೆ, ಘಟನೆಯ ಸಮಗ್ರ ತನಿಖೆ ನಡೆಸಿ ಇನ್ನೆರೆಡು ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT