ಮುಂಬೈಯಲ್ಲಿ ಈ ವಾರಾಂತ್ಯದಲ್ಲಿ ಭಾರೀ ಮಳೆ ಸಾಧ್ಯತೆಯಿದೆ 
ದೇಶ

ಸಹಜತೆಯತ್ತ ಮುಂಬೈ ಜನಜೀವನ, ರೈಲ್ವೆ ಸಂಚಾರ ಆರಂಭ

ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಸುರಿಯುತ್ತಿದ್ದ ಭಾರಿ ಮಳೆ ಇಂದು ಕಡಿಮೆಯಾಗಿದ್ದು...

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಸುರಿಯುತ್ತಿದ್ದ ಭಾರಿ ಮಳೆ ಇಂದು ಕಡಿಮೆಯಾಗಿದ್ದು, ಎಲ್ಲಾ 3 ಉಪನಗರಗಳಲ್ಲಿ  ರೈಲು ಸಂಚಾರ ಆರಂಭಗೊಂಡಿವೆ. ನಿಗದಿತ ಸಮಯಕ್ಕೆ ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿಗದ್ದಾರೆ.

ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ರೈಲು ಹಾಗೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮುಂಬೈ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ನಾಗರಿಕರು ಕೆಲಸಕ್ಕೆ ತೆರಳದೆ ಮನೆಯಲ್ಲಿ ಉಳಿದಿದ್ದರು. ಇಂದು ಕಚೇರಿಗಳಿಗೆ ತೆರಳುತ್ತಿರುವ ದೃಶ್ಯ ಕಂಡುಬಂತು. ಆದರೆ ಶಾಲಾ, ಕಾಲೇಜುಗಳಿಗೆ ಇಂದೂ ಕೂಡ ಸರ್ಕಾರ ರಜೆ ಘೋಷಿಸಿದೆ. 

ಆದರೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಗರಿಕರು ಇಂದು ಮಧ್ಯಾಹ್ನದಿಂದ ರಾತ್ರಿವರೆಗೆ ಭಾರೀ ಮಳೆ ಬೀಳುವ ಸಾಧ್ಯತೆಯಿರುವುದರಿಂದ ಹೊರ ಹೋಗದೆ ಮನೆಯಲ್ಲಿರುವುದು ಉತ್ತಮ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆಗೆ ನಿನ್ನೆ ನಗರದಲ್ಲಿ ವಿದ್ಯುದಾಘಾತದಿಂದ ಇಬ್ಬರು ಬಲಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT