ದೇಶ

ಮತ್ತೆ ಗುಂಡಿನ ದಾಳಿ ನಡೆಸಿದ ಮಾವೋವಾದಿ, ಓರ್ವ ಭದ್ರತಾ ಸಿಬ್ಬಂದಿ ಸಾವು

Vishwanath S

ದಾಂತೇವಾಡ: ಛತ್ತೀಸ್‌ಗಡದಲ್ಲಿ ಮಾವೋವಾದಿಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ದಾಂತೇವಾಡ ಜಿಲ್ಲೆಯ ತುಮ್ನಾರ್ ನಲ್ಲಿ ಮಾರ್ಕೆಟ್ ವೊಂದರ ಮೇಲೆ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೆ ಮೂವರಿಗೆ ಗಂಭೀರ ಗಾಯಗಳಾಗಿವೆ.

ಮಾವೋವಾದಿಗಳ ದಾಳಿಯನ್ನು ಛತ್ತೀಸ್‌ಗಡ ಮುಖ್ಯಮಂತ್ರಿ ರಮಣ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ.

SCROLL FOR NEXT