ಕೇರಳ ಸಿಎಂ ಒಮನ್ ಚಾಂದಿ 
ದೇಶ

ಶೈಕ್ಷಣಿಕ ಸಾಲಕ್ಕೆ ಏಕರೀತಿ ನಿಯಮ ಅನುಸರಿಸಿ: ಬ್ಯಾಂಕ್ ಗಳಿಗೆ ಕೇರಳ ಸಿಎಂ ಸೂಚನೆ

ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲಕ್ಕೆ ಎಲ್ಲಾ ಬ್ಯಾಂಕ್ ಗಳು ಏಕ ರೀತಿಯ ನಿಯಮ ಪಾಲಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಸೂಚನೆ...

ತಿರುವನಂತಪುರ: ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲಕ್ಕೆ ಎಲ್ಲಾ ಬ್ಯಾಂಕ್ ಗಳು ಏಕ ರೀತಿಯ ನಿಯಮ ಪಾಲಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಸೂಚನೆ ನೀಡಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬ್ಯಾಂಕ್ ಗಳು  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ವಿಭಿನ್ನ ರೀತಿಯ ಪ್ರಕ್ರಿಯೆಗಳನ್ನು ಅನುಸರಿಸುತ್ತಿವೆ. ಬಡ್ಡಿ ದರ ಹಾಗೂ, ಸಾಲ ಮರುಪಾವತಿ ಮಾಡುವ ಸಂದರ್ಭದಲ್ಲಿ ಕೆಲವೊಂದು ಷರತ್ತುಗಳನ್ನು ಅನುಸರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ, ಹೀಗಾಗಿ ಎಲ್ಲಾ ಬ್ಯಾಂಕ್ ಗಳು ಏಕ ರೀತಿ ನಿಯಮ ಜಾರಿಗೆ ತರಲು ಅವರು ಸಲಹೆ ನೀಡಿದ್ದಾರೆ.

ಇನ್ನು ಕಲಹ ಪೀಡಿತ ರಾಷ್ಟ್ರಗಳಾದ ಸಿರಿಯಾ, ಲಿಬಿಯಾ, ಇರಾಕ್ ನಂತಹ ರಾಷ್ಟ್ರಗಳಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಬ್ಯಾಂಕ್ ಗಳು ಈ ರಾಜ್ಯ ಸರ್ಕಾರಕ್ಕೆ ಪೂರಕವಾಗಿ ಸ್ಪಂದಿಸುತ್ತಿಲ್ಲ. ಜೊತೆಗೆ ರಾಜ್ಯದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕ್ ಗಳ ಸಹಾಯ ಅಗತ್ಯ ಎಂದು ಒಮನ್ ಚಾಂದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT