ವಸುಂಧರಾ ರಾಜೇ - ನಿತಿನ್ ಗಡ್ಕರಿ 
ದೇಶ

ಲಲಿತ್ ಮೋದಿ ಪ್ರಕರಣ: ರಾಜೇ ಬೆಂಬಲಕ್ಕೆ ನಿಂತ ಬಿಜೆಪಿ, ಸರ್ಕಾರ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ...

ಜೈಪುರ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಬೆಂಬಲಕ್ಕೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರ ನಿಂತಿದೆ.

ರಾಜೇ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ರಾಜಸ್ಥಾನ ಮುಖ್ಯಮಂತ್ರಿಯ ವಿರುದ್ಧದ ಆರೋಪಗಳೆಲ್ಲಾ ಆಧಾರ ರಹಿತ ಎಂದಿದ್ದಾರೆ. ಅಲ್ಲದೆ ಪಕ್ಷ ಹಾಗೂ ಸರ್ಕಾರ ರಾಜೇ ಬೆಂಬಲಕ್ಕಿದೆ ಎಂದಿದ್ದಾರೆ.

ಲಲಿತ್ ಮೋದಿ ಪ್ರಕರಣದ ಹಿನ್ನೆಲೆಯಲ್ಲಿ ಗಡ್ಕರಿ ಅವರು ಇಂದು ಜೈಪುರದಲ್ಲಿ ರಾಜೇ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಗಡ್ಕರಿ, ರಾಜೇ ವಿರುದ್ಧದ ಎಲ್ಲಾ ಆರೋಪಗಳು ಆಧಾರ ರಹಿತವಾಗಿದ್ದು, ಸರ್ಕಾರ ಮತ್ತು ಪಕ್ಷ ಅವರ ಬೆಂಬಲಕ್ಕಿದೆ ಎಂದು ಹೇಳಿದ್ದಾರೆ.

ಲಲಿತ್ ಮೋದಿ ಜತೆ ರಾಜೇ ಪುತ್ರ ದುಶ್ಯಂತ್ ಸಿಂಗ್ ಅವರು ಹಣಕಾಸು ವ್ಯವಹಾರ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗಡ್ಕರಿ, 'ಆ ಎಲ್ಲಾ ವ್ಯವಹಾರಗಳು ಆದಾಯ ತೆರಿಗೆ ಇಲಾಖೆಯಲ್ಲಿ ದಾಖಲಾಗಿವೆ. ಮತ್ತೊಬ್ಬರಿಂದ ಸಾಲ ಪಡೆಯುವುದು ಅಪರಾಧವಲ್ಲ' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT