ಕಳ್ಳಭಟ್ಟಿ ದುರಂತ 
ದೇಶ

ಮುಂಬೈ ಕಳ್ಳಬಟ್ಟಿ ದುರಂತ: ದೆಹಲಿಯಲ್ಲಿ ಪ್ರಮುಖ ಆರೋಪಿ ಸೆರೆ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 100 ಕ್ಕೂ ಹೆಚ್ಚು ಮಂದಿಯ ಬಲಿ ತೆಗೆದುಕೊಂಡಿದ್ದ ಕಳ್ಳಬಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ.

ನವದೆಹಲಿ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 100 ಕ್ಕೂ ಹೆಚ್ಚು ಮಂದಿಯ ಬಲಿ ತೆಗೆದುಕೊಂಡಿದ್ದ ಕಳ್ಳಬಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ.

ಮುಂಬೈ ಕಳ್ಳ ಭಟ್ಟಿ ದುರಂತದ ಮುಖ್ಯ ಆರೋಪಿ ಅತಿಖ್ ಯಾನೆ ರಾಜು ಎಂಬಾತನನ್ನು ದೆಹಲಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿ ಅತಿಖ್ ಯಾನೆ ರಾಜು ವಿಷಪೂರಿತ ಕಳ್ಳಭಟ್ಟಿಯ ಮುಖ್ಯ ಸರಬರಾಜುದಾರ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ದುರಂತದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಮೃತರಾಗಿರುವವರ ಸಂಖ್ಯೆ 102ಕ್ಕೆ ಏರಿದ್ದು, ಮುಂಬೈಯ ವಿವಿಧ ಆಸ್ಪತ್ರೆಗಳಿಗೆ ಹೊಸದಾಗಿ 48 ಮಂದಿ ದಾಖಲಾಗಿದ್ದಾರೆ ಎಂದು ಅಪರಾಧ ಶಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಮಲ್ವಾನಿಯ ಲಕ್ಷ್ಮಿ ನಗರ ಪ್ರದೇಶದ ಸುಮರು 150 ನಿವಾಸಿಗಳು ವಿವಿಧ ಸಾರಾಯಿ ಅಂಗಡಿಗಳಲ್ಲಿ ಮಾರಲಾಗಿದ್ದ ಕಳ್ಳಭಟ್ಟಿಯನ್ನು ಸೇವಿಸಿದ್ದರು. ಬುಧವಾರ ಬೆಳಗ್ಗೆ ಅವರ ಆರೋಗ್ಯ ಹದಗೆಟ್ಟಿತ್ತು. ಗುರುವಾರದ ವೇಳೆಗೆ 13 ಮಂದಿ ಸಾವನ್ನಪಿದ್ದರು. ದಿನಕಳೆದಂತೆ ಸಾವಿನ ಸಂಖ್ಯೆ ಆ ಬಳಿಕ ಏರುತ್ತಾ ಹೋಗಿ ಸೋಮವಾರದ ವೇಳೆಗೆ 100ರ ಗಡಿ ದಾಟಿತ್ತು.

ತಪ್ಪಿತಸ್ಥರನ್ನು ಗಲ್ಲಿಗೆ ಹಾಕಬೇಕು: ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್
ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕಳ್ಳಭಟ್ಟಿ ದುರಂತದಲ್ಲಿ ನೂರಾರು ಮಂದಿಯ ಪ್ರಾಣ ಬಲಿ ತೆಗೆದುಕೊಂಡವರಿಗೆ ಗರಿಷ್ಠ ಶಿಕ್ಷೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಇಂದು ಮಹಾರಾಷ್ಟ್ರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಫಡ್ನವಿಸ್ ಅವರು, ಅಧಿಕಾರಿಗಳಿಂದ ಮಾಹಿತ ಪಡೆದರು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಫಡ್ನವಿಸ್ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT