ಅರವಿಂದ್ ಕೇಜ್ರಿವಾಲ್ 
ದೇಶ

ತೋಮಾರ್ ನಕಲಿ ಪ್ರಮಾಣ ಪತ್ರ; ನನಗೆ ಸತ್ಯ ಗೊತ್ತಿರಲಿಲ್ಲ- ಅರವಿಂದ್ ಕೇಜ್ರಿವಾಲ್

ಮಾಜಿ ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ...

ನವದೆಹಲಿ:  ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ ಸುಮ್ಮನಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮೌನ ಮುರಿದಿದ್ದಾರೆ.

ದೆಹಲಿ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ  ಮಾತನಾಡಿದ ಅವರು, ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯವಾದದ್ದು, ಇದುವರೆಗೂ ನಾನು ಕತ್ತಲೆಯಲ್ಲಿ ಮುಳುಗಿ ಹೋಗಿದ್ದೆ. ತೋಮಾರ್ ತೋರಿದ್ದ ದಾಖಲೆಗಳು ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಸದನಕ್ಕೆ ವಿವರ ನೀಡಿದರು.

ನಕಲಿ ಪದವಿ ಪ್ರಮಾಣ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಒಂದು ವೇಳೆ ಜಿತೇಂದ್ರ ಸಿಂಗ್ ತೋಮಾರ್ ಅವರದ್ದು ತಪ್ಪು ಎಂದು ಸಾಬೀತಾದರೇ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಯಾವುದೇ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅದನ್ನು ಪಕ್ಷ ಹಾಗೂ ನಾನು ಸಹಿಸಲ್ಲ. ಯಾವುದೇ ಸಚಿವರೊಂದಿಗೆ ನನಗೆ ವಯಕ್ತಿಕ ಸಂಬಂಧವಿಲ್ಲ. ಹೀಗಾಗಿಯೇ ತೋಮಾರ್ ರಾಜೀನಾಮೆ ಅಂಗೀಕರಿಸಿದ್ದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT