ವಲ್ಸನ್ ಥಾಂಪು 
ದೇಶ

ದೆಹಲಿ ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪ್ರಾಂಶಪಾಲರ ಪ್ರತಿಕ್ರಿಯೆ

ಮಹಾತ್ಮ ಗಾಂಧಿ, ಪ್ರವಾದಿ ಮಹಮದ್ ಹಾಗೂ ಯೇಸು ಕ್ರಿಸ್ತನಂತಹ ದೇವ ಮಾನವರೂ ಹಾಗೂ ಸಮಾಜ ಸುಧಾಕಕರ ವಿರುದ್ಧವೂ ....

ನವದೆಹಲಿ: ಮಹಾತ್ಮ ಗಾಂಧಿ, ಪ್ರವಾದಿ ಮಹಮದ್ ಹಾಗೂ ಯೇಸು ಕ್ರಿಸ್ತನಂತಹ ದೇವ ಮಾನವರೂ ಹಾಗೂ ಸಮಾಜ ಸುಧಾಕಕರ ವಿರುದ್ಧವೂ  ಕೂಡ ಆರೋಪಗಳು ಕೇಳಿ ಬಂದಿದ್ದವು ಎಂದು ದೆಹಲಿಯ ಸೇಂಟ್ ಸ್ಟೀಫನ್ ಕಾಲೇಜು ಪ್ರಾಂಶುಪಾಲ ವಲ್ಸನ್ ಥಾಂಪು ಹೇಳಿದ್ದಾರೆ.

ಸೇಂಟ್ ಸ್ಟೀಫನ್ ಕಾಲೇಜು ಸಹ ಪ್ರಾದ್ಯಾಪಕ ಸತೀಶ್ ಕುಮಾರ್ ವಿರುದ್ದ ದಾಖಲಾಗಿರುವ ಪಿಎಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪ್ರತಿಕ್ರಯಿಸಿದ ಅವರು,  ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ, ಆರೋಪಿ ಅತಿ ಹೆಚ್ಚು ಪ್ರಮಾಣದ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಹೇಳಿದರು.

ಇನ್ನು ಈ ಪ್ರಕರಣದಲ್ಲಿ ತಾವು ಯಾರನ್ನೂ ರಕ್ಷಿಸುತ್ತಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಸ್ಪಷ್ಟ ಪಡಿಸಿದರು. ಇನ್ನು ಲೈಂಗಿಕ ಕಿರುಕುಳ ನಡೆದಿದೆ, ಇಲ್ಲ ಎಂಬುದನ್ನು ನಿರ್ಧರಿಸಲು ನಾನು ಯಾರು ಎಂದು ಪ್ರಶ್ನಿಸಿದ ಅವರುಸ ಅದಕ್ಕಾಗಿ ತನಿಖಾ ತಂಡ ನೇಮಕವಾಗಿದೆ ಎಂದರು.

ಲೈಂಗಿಕ ಕಿರುಕುಳ ಆರೋಪದಡಿ ಪ್ರೊ. ಸತೀಶ್ ಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನಿಗೆ ಸತೀಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT