ಯೋಗ ಮಾಡುತ್ತಿದ್ದಾಗ ಗಾಢನಿದ್ದೆಗೆ ಜಾರಿರುವ ಸುರೇಶ್ ಪ್ರಭು ಅವರನ್ನು ತರಬೇತುದಾರರು ಎಬ್ಬಿಸುತ್ತಿರುವ ಚಿತ್ರ 
ದೇಶ

ಶವಾಸನ ಮಾಡುವಾಗ ಗಾಢ ನಿದ್ದೆಗೆ ಜಾರಿದ ರೈಲ್ವೆ ಸಚಿವ ಸುರೇಶ್ ಪ್ರಭು

ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದೆಲ್ಲೆಡೆ ಸಾಮಾನ್ಯ ಜನರು, ಸಂಸದರು, ಪ್ರಧಾನಮಂತ್ರಿಗಳೆಲ್ಲರೂ ಎಲ್ಲಾ ಕೆಲಸಗಳನ್ನು ಮರೆತು ಯೋಗ ಮಾಡಿ ಮನಸ್ಸು ಶುದ್ಧ ಮಾಡಿಕೊಳ್ಳುವುದರಲ್ಲಿ ತೊಡಗಿದ್ದರೆ, ಇತ್ತ ಕೇಂದ್ರ ರೈಲ್ವೆ ಸಚಿವ...

ನವದೆಹಲಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದೆಲ್ಲೆಡೆ ಸಾಮಾನ್ಯ ಜನರು, ಸಂಸದರು, ಪ್ರಧಾನಮಂತ್ರಿಗಳೆಲ್ಲರೂ ಎಲ್ಲಾ ಕೆಲಸಗಳನ್ನು ಮರೆತು ಯೋಗ ಮಾಡಿ ಮನಸ್ಸು ಶುದ್ಧ ಮಾಡಿಕೊಳ್ಳುವುದರಲ್ಲಿ ತೊಡಗಿದ್ದರೆ, ಇತ್ತ ಕೇಂದ್ರ ರೈಲ್ವೆ ಸಚಿವ ಯೋಗಮಾಡುವ ನೆಪದಲ್ಲಿ ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಎಂಬಂತೆ ಶವಾಸನ ಮಾಡುತ್ತಿದ್ದಾಗ ಗಾಢ ನಿದ್ದೆಗೆ ಜಾರಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಜೂನ್.21 ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಕೊಚ್ಚಿಗೆ ತೆರಳಿದ್ದರು. ಕೊಚ್ಚಿಯ ಸ್ಟೇಡಿಯಂ ಒಂದರಲ್ಲಿ ಯೋಗ ದಿನವನ್ನು ಆಯೋಜಿಸಲಾಗಿತ್ತು. ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುರೇಶ್ ಪ್ರಭು ಅವರು ಕೆಲವು ಯೋಗಸಾನಗಳನ್ನು ಮಾಡಿದ್ದರು. ಈ ವೇಳೆ ಯೋಗದ ಹಲವು ಭಾಗಗಳಲ್ಲಿ ಒಂದಾದ ಶವಾಸನವನ್ನು ಮಾಡಿಸಲಾಯಿತು. ಆದರೆ, ಯೋಗದ ಎಲ್ಲಾ ಆಸನಗಳಿಗಿಂತ ಶವಾಸನವನ್ನು ಗಂಭೀರವಾಗಿ ಪರಿಗಣಿಸಿದ್ದ ಸುರೇಶ್ ಪ್ರಭು ಅವರು ಶವಾಸನವನ್ನು ಮಾಡುತ್ತಲೇ ಇದ್ದಕ್ಕಿದ್ದಂತೆ ಗಾಢನಿದ್ದೆಗೆ ಜಾರಿದ್ದಾರೆ. ಎಷ್ಟು ಹೊತ್ತಾದರೂ ಸುರೇಶ್ ಪ್ರಭು ಅವರು ಏಳದಿರುವುದನ್ನು ಕಂಡ ತರಬೇತುದಾರರೊಬ್ಬರು ನಂತರ ಅವರನ್ನು ಎಬ್ಬಿಸಿದ್ದಾರೆ.

ಸುರೇಶ್ ಪ್ರಭು ಅವರು ನಿದ್ರೆಗೆ ಜಾರಿರುವ ಈ ಸುದ್ದಿಯು ಹಲವು ಪ್ರಾದೇಶಿಕ ಪತ್ರಿಕೆಗಳು ಸೇರಿದಂತೆ ಮಲೆಯಾಳಂನ ಮನೋರಮಾ ಪತ್ರಿಕೆಯಲ್ಲೂ ಕೂಡ ಪ್ರಕಟಗೊಂಡಿದ್ದವು. ಈದೀಗ ಈ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT