ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ಭೂ ವಿಧೇಯಕ ಅಸ್ತುಗೆ ಜಂಟಿ ಅಧಿವೇಶನ: ಜೇಟ್ಲಿ

ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಸರ್ಕಾರದ ಪ್ರಯತ್ನ ಮುಂದುವರಿದಿದೆ. ಈ ಬಾರಿ ವಿಧೇಯಕದ ವಿಚಾರದಲ್ಲಿ ಒಮ್ಮತ ಮೂಡದೇ ಇದ್ದರೆ...

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಸರ್ಕಾರದ ಪ್ರಯತ್ನ ಮುಂದುವರಿದಿದೆ. ಈ ಬಾರಿ ವಿಧೇಯಕದ ವಿಚಾರದಲ್ಲಿ ಒಮ್ಮತ ಮೂಡದೇ ಇದ್ದರೆ ಸಂಸತ್‍ನ ಜಂಟಿ ಅಧಿವೇಶನ ಕರೆದು ಭೂ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

``ಮುಂದಿನ ಹಂತದ ಸುಧಾರಣೆ ಯಶಸ್ವಿಯಾಗಬೇಕೆಂದರೆ ಹಾಗೂ ಭಾರತವು ಪ್ರಗತಿಯ ಗುರಿ ತಲುಪಬೇಕೆಂದರೆ ಭೂ ವಿಧೇಯಕ ಅಂಗೀಕಾರ ಅನಿವಾರ್ಯ'' ಎಂದಿರುವ ಜೇಟ್ಲಿ, ``ಜಂಟಿ ಅಧಿವೇಶನ ಕರೆಯುವಂತಹ ಸನ್ನಿವೇಶ ನಿರ್ಮಾಣವಾಗುವುದು ಬೇಡ. ಅದಕ್ಕೆ ಮೊದಲೇ ಎಲ್ಲರೂ ಒಪ್ಪಿ ವಿಧೇಯಕವನ್ನು ಅಂಗೀಕರಿಸಲಿ'' ಎಂದು ಹೇಳಿದ್ದಾರೆ.

ಆರೆಸ್ಸೆಸ್ ಅಂಗಸಂಸ್ಥೆಗಳ ವಿರೋಧ: ಯುಪಿಎ ಸರ್ಕಾರದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದ ಮೋದಿ ಸರ್ಕಾರದ ನಿರ್ಧಾರಕ್ಕೆ ಸ್ವತಃ ಆರೆಸ್ಸೆಸ್‍ನ ಮೂರು ಅಂಗಸಂಸ್ಥೆಗಳೇ ವಿರೋಧ ವ್ಯಕ್ತಪಡಿಸಿವೆ. ಜಂಟಿ ಸಂಸದೀಯ ಸಮಿತಿಯ ಮುಂದೆ ತಮ್ಮ ಅಬಿsಪ್ರಾಯ ವ್ಯಕ್ತಪಡಿಸಿದ ರತೀಯ ಮಜ್ದೂರ್ ಸಂಘ, ಭಾರತೀಯ ಕಿಸಾನ್ ಸಂಘ, ಅಖಿಲ ಭಾರತೀಯ ವನವಾಸಿ ಕಲ್ಯಾಣ್ ಆಶ್ರಮ್, ವಿಧೇಯಕಕ್ಕೆ ತಂದ ತಿದ್ದುಪಡಿಯನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT