ಉತ್ತರ ಭಾರತದಲ್ಲಿ ಭಾರೀ ಮಳೆ: ಪ್ರವಾಹ ಭೀತಿಯಲ್ಲಿ ಜನರು (ಸಾಂದರ್ಭಿಕ ಚಿತ್ರ) 
ದೇಶ

ಉತ್ತರ ಭಾರತದಲ್ಲಿ ಭಾರೀ ಮಳೆ: ಪ್ರವಾಹ ಭೀತಿಯಲ್ಲಿ ಜನರು

ಉತ್ತರ ಭಾರತದಾದ್ಯಂತ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಉತ್ತರ ಭಾರತದಾದ್ಯಂತ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಉತ್ತರ ಭಾರತದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವೆಡೆ ರಸ್ತೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಮಳೆಯ ಅಬ್ಬರಕ್ಕೆ ಕೇದಾರನಾಥ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ತಂದೊಡ್ಡಿರುವ ಸಂಕಷ್ಟಕ್ಕೆ ಯಾತ್ರಿಕರು ನಡುರಸ್ತೆಯಲ್ಲೇ ಪರದಾಡುವಂತಾಗಿದೆ.

ಸಂಗಮ ನದಿ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಈಗಾಗಲೇ ಅಪಾಯ ಮಟ್ಟ ತಲುಪುತ್ತಿದ್ದು, ಸ್ಥಳೀಯ ಪ್ರದೇಶಗಳಲ್ಲಿ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ನದಿ ತೀರ ಪ್ರದೇಶದಲ್ಲಿ ವಾಸಿಸುವ ಜನರು ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಇನ್ನು 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ  

ಇನ್ನುಳಿದಂತೆ ಗುಜಾರಾತ್ ನಲ್ಲಿ ಈಗಾಗಲೇ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯ ಆರ್ಭಟಕ್ಕೆ 34 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT