ಸಾಂದರ್ಭಿಕ ಚಿತ್ರ 
ದೇಶ

ಮೌನೇಶ್‍ಗೆ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ

ಕರ್ನಾಟಕದ ಮೌನೇಶ್ ಬಡಿಗೇರ್ ಪ್ರಸಕ್ತ ಸಾಲಿನ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬಡಿಗೇರ್ ಅವರ ಸಣ್ಣ ಕಥೆಗಳ ಸಂಕಲನಕ್ಕೆ ಈ ಪ್ರಶಸ್ತಿ...

ನವದೆಹಲಿ: ಕರ್ನಾಟಕದ ಮೌನೇಶ್ ಬಡಿಗೇರ್ ಪ್ರಸಕ್ತ ಸಾಲಿನ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬಡಿಗೇರ್ ಅವರ ಸಣ್ಣ ಕಥೆಗಳ ಸಂಕಲನಕ್ಕೆ ಈ ಪ್ರಶಸ್ತಿ ಸಂದಿದೆ. ಕೊಂಕಣಿ ಭಾಷೆಯ ಕವನ ಸಂಕಲನಕ್ಕೆ ಶ್ರೀನಿವಾಸ್ ನಾಯಕ್ ಸಹ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಸ್ಮರಣ ಫಲಕ ಮತ್ತು ರು.50 ಸಾವಿರ ನಗದು ಒಳಗೊಂಡಿದೆ.

ಅಕಾಡೆಮಿ ಬುಧವಾರ 23 ಭಾಷೆಗಳಲ್ಲಿ ವಾರ್ಷಿಕ ಯುವ ಪುರಸ್ಕಾರ ಪ್ರಶಸ್ತಿಗಳನ್ನು ಪ್ರಕಟಿಸಿದೆ. 13 ಕವನ ಸಂಕಲನಗಳು, ಮೂರು ಕಾದಂಬರಿ, ಆರು ಸಣ್ಣ ಕಥೆಗಳ ಸಂಕಲನ ಮತ್ತು ಒಂದು ವಿಮರ್ಶಾ ಪುಸ್ತಕವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ವರ್ಷ ಕಾಶ್ಮೀರಿ ಭಾಷೆಗೆ ಪ್ರಶಸ್ತಿ ನೀಡಿಲ್ಲ ಎಂದು ಅಕಾಡೆಮಿಯ ಅಧಿಕೃತ ಮೂಲಗಳು ಹೇಳಿವೆ. 23 ಭಾಷೆಗಳ ಸದಸ್ಯರಿಂದ ಆಯ್ಕೆ ಮಂಡಳಿ ಈ ಶಿಫಾರಸುಗಳನ್ನು ಮಾಡಿತ್ತು.

ಅಕಾಡೆಮಿ ಅಧ್ಯಕ್ಷ ವಿಶ್ವನಾಥ್ ಪ್ರಸಾದ್ ತಿವಾರಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾರ್ಯಕಾರಿ ಮಂಡಳಿ ಶಿಫಾರಸುಗಳನ್ನು ಅನುಮೋದಿಸಿತು. ಇದೇ ವೇಳೆ, ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ ಕೂಡ ಘೋಷಣೆಯಾಗಿದ್ದು ಐವರು ಕಾದಂಬರಿಕಾರರು, ನಾಲ್ಕು ಸಣ್ಣಕತೆಗಾರರು, ಮೂವರು ಕವನ ಬರಹಗಾರರಿಗೆ ಸಂದಿದೆ. ಪ್ರಶಸ್ತಿ 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಮಕ್ಕಳ ಸಾಹಿತ್ಯಕ್ಕೆ ನೀಡಿದ ಸಮಗ್ರ ಕೊಡುಗೆಗಾಗಿ ಕರ್ನಾಟಕದ ಟಿ.ಎಸ್ ನಾಗರಾಜ ಶೆಟ್ಟಿಯವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಯಾವಾಗ ನಡೆಯಲಿದೆ ಎಂಬುದನ್ನು ಅಕಾಡೆಮಿ ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT