ದೇಶ

ಮಹಾರಾಷ್ಟ್ರದಲ್ಲಿ ಬಸ್‌ಗೆ ಕಂಟೇನರ್ ಡಿಕ್ಕಿ: 20 ಸಾವು

Rashmi Kasaragodu

ಮುಂಬೈ: ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯಲ್ಲಿ ಬಸ್ ಮತ್ತು ಕಂಟೇನರ್ ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ 20 ಮಂದಿ ಸಾವಿಗೀಡಾಗಿದ್ದಾರೆ. 15 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಧುಲೇ- ಚಾಲೀಸ್‌ಗಾಂವ್ ಹೈವೇಯಲ್ಲಿ ಗುರುವಾರ ಮಧ್ಯಾಹ್ನ  2.30ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ.

ಅಧಿಕ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ  ಸೂರತ್ ನಿಂದ ಚಾಲೀಸ್ ಗಾಂವ್‌ಗೆ ಹೋಗುತ್ತಿದ್ದ ಮಹಾರಾಷ್ಟ್ರ ಸ್ಟೇಟ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಬಸ್ ವಿರುದ್ಧ ದಿಶೆಯಿಂದ ಬರುತ್ತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದಿತ್ತು. ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತರಾಗಿದ್ದಾರೆ.

SCROLL FOR NEXT