ಶೋಭಾ ಓಜಾ 
ದೇಶ

ಮೋದಿ ಸರ್ಕಾರ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಕಾಂಗ್ರೆಸ್

ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎಂಬುದು ಕರಾಳ ಸಮಯವಾಗಿತ್ತು, ಇಡೀ ದೇಶವೇ ಕತ್ತಲೆಯಲ್ಲಿ ಮುಳುಗಿತ್ತು ...

ನವದೆಹಲಿ: ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎಂಬುದು ಕರಾಳ ಸಮಯವಾಗಿತ್ತು, ಇಡೀ ದೇಶವೇ ಕತ್ತಲೆಯಲ್ಲಿ ಮುಳುಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಸದ್ಯ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಕಾಂಗ್ರೆಸ್  ವಕ್ತಾರೆ ಶೋಭಾ ಓಜಾ ಹೇಳಿದ್ದಾರೆ.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸೂಟು ಬೂಟಿನ ಸರ್ಕಾರ 1975 ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನೇ ಮತ್ತೆ ಹೇರಿದೆ. ಬಿಜೆಪಿಯ ಹಿರಿಯ ನಾಯಕ ಎಲ್. ಕೆ ಅಡ್ವಾಣಿಗೆ ಎನ್ ಡಿ ಎ ಸರ್ಕಾರದ ನಾಯಕರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಅವರು ಮತ್ತೆ ತುರ್ತು ಪರಿಸ್ಥಿತಿ ಸಂದರ್ಭ ಬರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದರು ಎಂದು ಶೋಬಾ ಓಜಾ ಟೀಕಿಸಿದರು.

ಇನ್ನು ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೋಭಾ ತಪ್ಪಿತಸ್ಥರು ಹಾಗೂ ತಲೆಮರೆಸಿಕೊಂಡವರನ್ನು ರಕ್ಷಿಸಿ ಅವರನ್ನು ಕಾಪಾಡುವುದು ಬಿಜೆಪಿ ಮತ್ತೊಂದು ಮುಖ ಎಂದು ಆರೋಪಿಸಿದ ಅವರು ಲಲಿತ್ ಮೋದಿ ಪ್ರಕರಣದಲ್ಲಿ ಬಿಜೆಪಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT