ಶೋಭಾ ಓಜಾ 
ದೇಶ

ಮೋದಿ ಸರ್ಕಾರ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಕಾಂಗ್ರೆಸ್

ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎಂಬುದು ಕರಾಳ ಸಮಯವಾಗಿತ್ತು, ಇಡೀ ದೇಶವೇ ಕತ್ತಲೆಯಲ್ಲಿ ಮುಳುಗಿತ್ತು ...

ನವದೆಹಲಿ: ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎಂಬುದು ಕರಾಳ ಸಮಯವಾಗಿತ್ತು, ಇಡೀ ದೇಶವೇ ಕತ್ತಲೆಯಲ್ಲಿ ಮುಳುಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಸದ್ಯ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಕಾಂಗ್ರೆಸ್  ವಕ್ತಾರೆ ಶೋಭಾ ಓಜಾ ಹೇಳಿದ್ದಾರೆ.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸೂಟು ಬೂಟಿನ ಸರ್ಕಾರ 1975 ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನೇ ಮತ್ತೆ ಹೇರಿದೆ. ಬಿಜೆಪಿಯ ಹಿರಿಯ ನಾಯಕ ಎಲ್. ಕೆ ಅಡ್ವಾಣಿಗೆ ಎನ್ ಡಿ ಎ ಸರ್ಕಾರದ ನಾಯಕರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಅವರು ಮತ್ತೆ ತುರ್ತು ಪರಿಸ್ಥಿತಿ ಸಂದರ್ಭ ಬರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದರು ಎಂದು ಶೋಬಾ ಓಜಾ ಟೀಕಿಸಿದರು.

ಇನ್ನು ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೋಭಾ ತಪ್ಪಿತಸ್ಥರು ಹಾಗೂ ತಲೆಮರೆಸಿಕೊಂಡವರನ್ನು ರಕ್ಷಿಸಿ ಅವರನ್ನು ಕಾಪಾಡುವುದು ಬಿಜೆಪಿ ಮತ್ತೊಂದು ಮುಖ ಎಂದು ಆರೋಪಿಸಿದ ಅವರು ಲಲಿತ್ ಮೋದಿ ಪ್ರಕರಣದಲ್ಲಿ ಬಿಜೆಪಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?