ವಸುಂಧರಾ ರಾಜೇ 
ದೇಶ

'ರಾಜೇ ರಾಜಿನಾಮೆಗೆ ಸಿದ್ಧ, ಆದ್ರೆ ಲಲಿತ್ ಮೋದಿ ಪ್ರಕರಣದ ಇತರೆ ಆರೋಪಿಗಳು ರಾಜಿನಾಮೆ ನೀಡಬೇಕು'

ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ಜತೆ ವ್ಯವಹಾರಿ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ...

ಜೈಪುರ/ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ಜತೆ ವ್ಯವಹಾರಿ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು, ಪ್ರಕರಣದ ನೈತಿಕ ಹೊಣೆ ಹೊತ್ತು ತಾವು ರಾಜಿನಾಮೆ ನೀಡಲು ಸಿದ್ಧ. ಆದರೆ ಪ್ರಕರಣದ ಇತರೆ ಆರೋಪಿಗಳು ಸಹ ರಾಜಿನಾಮೆ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ಲಲಿತ್ ಮೋದಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ಇತರೆ ಆರೋಪಿ(ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್)ಗಳು ರಾಜಿನಾಮೆ ನೀಡಿದರೆ, ತಾನೂ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಿದ್ಧ ಎಂದಿದ್ದಾರೆ.

ಒಂದು ವೇಳೆ ರಾಜೇ ಅವರಿಂದ ರಾಜಿನಾಮೆ ಪಡೆದರೆ, ಪ್ರಕರಣದ ಮತ್ತೊಬ್ಬ ಆರೋಪಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಂದಲೂ ರಾಜಿನಾಮೆ ಪಡೆಯುವ ಅನಿವಾರ್ಯತೆ ಈಗ ಬಿಜೆಪಿಗೆ ಎದುರಾಗಿದೆ.

ರಾಜೇ ಜತೆ ನಿರಂತರ ಸಂಪರ್ಕದಲ್ಲಿರುವ ಬಿಜೆಪಿ ಮುಖಂಡರು ಸದ್ಯಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಬೆಂಬಲಕ್ಕೆ ನಿಲ್ಲಲು ನಿರ್ಧರಿಸಿದ್ದಾರೆ. ಅಲ್ಲದೆ ಆರ್ಎಸ್ಎಸ್ ಸಹ ಇದನ್ನೇ ಹೇಳಿದೆ ಎನ್ನಲಾಗಿದೆ.
(ಐಎಎನ್ ಎಸ್ ಮೂಲಗಳಿಂದ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT