ಝಕೀವುರ್ ರೆಹಮಾನ್ ಲಖ್ವಿ 
ದೇಶ

ಚೀನಾ ಜತೆ ಲಖ್ವಿ ವಿಚಾರ ಪ್ರಸ್ತಾಪಿಸಿದ ಸಚಿವೆ ಸುಷ್ಮಾ

ಚೀನಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಅಲ್ಲಿನ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿದ್ದಾರೆ...

ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಅಲ್ಲಿನ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿದ್ದಾರೆ.

ಮುಂಬೈ ದಾಳಿ ಸಂಚುಕೋರ ಝಕೀವುರ್ ರೆಹಮಾನ್ ಲಖ್ವಿ ವಿಚಾರದಲ್ಲಿ ವಿಶ್ವಸಂಸ್ಥೆಯಲ್ಲಿ ಭಾರತದ ನಿರ್ಧಾರಕ್ಕೆ ತಡೆಯೊಡ್ಡಿದ ಚೀನಾದ ನಿಲುವಿನ ಬಗ್ಗೆಯೂ ಸುಷ್ಮಾ ಪ್ರಸ್ತಾಪಿಸಿದ್ದಾರೆ. ಜತೆಗೆ, 'ಇಂತಹ ಕ್ರಮವು ಎರಡೂ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿಸ ಬಹುದು. ಲಖ್ವಿ ಸಾಮಾನ್ಯ ಉಗ್ರನಲ್ಲ. ಆತನ ಸಂಚಿನಲ್ಲಿ ನಡೆದ ಮುಂಬೈ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದಾರೆ'' ಎಂದೂ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಲಖ್ವಿ ವಿಚಾರದಲ್ಲಿ ಮೌನ ಮುರಿದ ಚೀನಾ, 'ವಿಶ್ವಸಂಸ್ಥೆಯ ಸಮಿತಿ ಪ್ರಸ್ತಾಪಿಸುವ ಉಗ್ರ ಕೃತ್ಯ ಸಂಬಂಧಿ ವಿಚಾರಗಳ ಬಗ್ಗೆ ಭಾರತ, ಚೀನಾ ಮತ್ತು ಸಂಬಂಧಪಟ್ಟ ದೇಶವು ಪರಸ್ಪರ ಮಾತನಾಡಿಕೊಳ್ಳುವುದು ಉತ್ತಮ'' ಎಂದಿದೆ. ಜತೆಗೆ, ಚೀನಾ ಎಲ್ಲ ರೀತಿಯ ಉಗ್ರವಾದವನ್ನೂ ವಿರೋಧಿಸುತ್ತದೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT