ಶವ ಪತ್ತೆಯಾಗಿದ್ದ ರೈಲ್ವೆ ಹಳಿ 
ದೇಶ

ಮೇಲ್ಜಾತಿ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಇಂಜಿನಿಯರ್ ಹತ್ಯೆ ?

ಮೇಲ್ಜಾತಿಗೆ ಸೇರಿದ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಕುಟುಂಬದ ಎಂಜಿನಿಯರ್ ನನ್ನು ಕೊಂದಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ನಲ್ಲಿ ನಡೆದಿದೆ...

ನಾಮಕ್ಕಲ್, ತಮಿಳುನಾಡು: ಮೇಲ್ಜಾತಿಗೆ ಸೇರಿದ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಕುಟುಂಬದ ಎಂಜಿನಿಯರ್ ನನ್ನು  ಕೊಂದಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ನಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನ ಗೋಕುಲ್ ರಾಜ್ ಎಂಬಾತನ ಶವ  ರೈಲ್ವೆ ಹಳಿಯ ಮೇಲೆ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿರುವ ಆತನ ಪೋಷಕರು ತಮ್ಮ ಮಗ ಮೇಲ್ಜಾತಿಗೆ ಸೇರಿದ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದ. ಆ ಹುಡುಗಿ ಕಡೆಯವರು ತಮ್ಮ ಮಗನನ್ನು ಅಪಹರಿಸಿ ಹತ್ಯೆ ಮಾಡಿ ರೇಲ್ವೆ ಹಳಿ ಮೇಲೆ ಶವ ಬಿಸಾಕಿದ್ದಾರೆಂದು ಆರೋಪಿಸಿದ್ದಾರೆ.

ಸ್ಥಳೀಯ ಮುಖಂಡ ಯುವರಾಜ್ ಎಂಬಾತನ ವಿರುದ್ಧ ಮೃತ ಎಂಜಿನೀಯರ್ ಪೋಷಕರು ದೂರು ದಾಖಲಿಸಿದ್ದಾರೆ. ಇನ್ನು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಾಮಕ್ಕಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

2013 ರಲ್ಲಿಯೂ ತಮಿಳುನಾಡಿನ ಧರ್ಮಪುರಿಯಲ್ಲಿ ಇಂತುಹುದ್ದೇ ಪ್ರಕರಣವೊಂದು ನಡೆದಿತ್ತು. ಕೊಂಗು ವೆಲ್ಲಾಲಾರ್ ಸಮುದಾಯಕ್ಕೆ ಸೇರಿದ ಯುವತಿಯನ್ನು ದಲಿತನಾದ ಇಳವರಸನ್ ಎಂಬಾತ ವಿವಾಹವಾಗಿದ್ದ. ಹುಡುಗಿ ಕುಟುಂಬದವರ ತೀವ್ರ ವಿರೋಧದ ನಡುವೆಯೂ ಈ ಇಬ್ಬರು ಮದುವೆಯಾಗಿದ್ದರು. ಇದಾದ ನಂತರ ಯುವತಿ ತಂದೆ ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದ ಬೆದರಿದ ಯುವತಿ ಇಳವರಸನ್ ಜೊತೆ ಸಂಸಾರ ನಡೆಸದೆ ತಂದೆ ಮನೆಗೆ ವಾಪಸ್ ಆಗಿದ್ದಳು. ತದ ನಂತರ ಇಳವರಸನ್ ಕೂಡ ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

SCROLL FOR NEXT