ಮೆಥಂಫೆಟಮೈನ್ 
ದೇಶ

ಕೋಟ್ಯಾಧಿಪತಿ ಅಮಲುದಾರ ಈಗ ಪೊಲೀಸರ ಅತಿಥಿ

ಈತ 20 ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ತೆಲಂಗಾಣದ ಗ್ರಾಮವೊಂದರಿಂದ ನಗರಕ್ಕೆ ಬಂದವನು. ವಿಜ್ಞಾನ ಪದವಿ ಪೂರೈಸದೇ ಕಾಲೇಜನ್ನು...

ಹೈದರಾಬಾದ್: ಈತ 20 ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ತೆಲಂಗಾಣದ ಗ್ರಾಮವೊಂದರಿಂದ ನಗರಕ್ಕೆ ಬಂದವನು. ವಿಜ್ಞಾನ ಪದವಿ ಪೂರೈಸದೇ ಕಾಲೇಜನ್ನು ಅರ್ಧಕ್ಕೇ ಬಿಟ್ಟವನು. ಈಗ ಕೋಟ್ಯಾಧಿಪತಿ, ಸಿಂಗಾಪುರದ ಹೋಟೆಲ್ ನಲ್ಲಿ ಪಾಲುದಾರ, ಮಲ್ಲಾಪುರದಲ್ಲಿ ದೊಡ್ಡ ದೊಡ್ಡ ನಿವೇಶನ ಗಳ ಒಡೆಯ! ಅಷ್ಟೇ ಅಲ್ಲ, ಸದ್ಯಕ್ಕೆ ಪೊಲೀಸರ ಅತಿಥಿ.

ಈತ ಹೇಗೆ ಕೋಟ್ಯಾಧಿಪತಿಯಾದ ಎಂದು ಕೇಳುತ್ತೀರಾ? ಕಾಲೇಜು ಬಿಟ್ಟು ಕೆಮಿಕಲ್ ಕಾರ್ಖಾನೆಯೊಂದನ್ನು ಸೇರಿದ್ದ ರಮೇಶ್(34) ಅಲ್ಲಿಂದ ಕೆಲಸ ಬಿಟ್ಟ ನಂತರ ಆರಂಭಿಸಿದ್ದು ಅಮಲು ಪದಾರ್ಥ ತಯಾರಿಕಾ ಘಟಕವನ್ನು. ಕೆಮಿಸ್ಟ್ ತರಬೇತಿ ಪಡೆಯದಿದ್ದರೂ ರಮೇಶ್ ಮೆಥಂಫೆಟಮೈನ್ ಎಂಬ ಅಮಲು ಪದಾರ್ಥವನ್ನು ತಯಾರಿಸಲು ಕಲಿತಿದ್ದ.

ಈ ಮೇಥ್ ಅನ್ನು ಚೆನ್ನೈ ಮೂಲಕ ಸಿಂಗಾಪುರ ಮತ್ತು ಮಲೇಷ್ಯಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ. ಮೇಥ್ ಎನ್ನುವುದು ವಿಶ್ವದಲ್ಲೇ ಅತ್ಯಂತ ದುಬಾರಿ ಡ್ರಗ್. ಹೀಗಾಗಿ ರಮೇಶ್ ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ಕೋಟಿಯ ಒಡೆಯನಾಗಿದ್ದ. ಈಗ ಸೈಬರಾಬಾದ್ ಪೊಲೀಸರ ವಿಶೇಷ ತನಿಖಾ ತಂಡವು ರಮೇಶ್ ನ ಗ್ಯಾಂಗ್ ಮೇಲೆ ಏಕಾಏಕಿ ದಾಳಿ ಮಾಡಿದೆ.

ಈ ಸಮಯದಲ್ಲಿ ಅವರು 13.5 ಕೆಜಿ ಮೆಥಂಫೆಟಮೈನ್ ಅನ್ನು ಚೆನ್ನೈಗೆ ಸಾಗಿಸಲು ಯತ್ನಿಸುತ್ತಿದ್ದರು. 'ಈತನನ್ನು ಬಂಧಿಸಿದ ಬಳಿಕವೇ ನಮಗೆ ಈತ ಕೋಟ್ಯಾಧಿಪತಿ ಎಂದು ಗೊತ್ತಾಗಿದ್ದು' ಎಂದಿದ್ದಾರೆ ಇನ್ ಸ್ಪೆಕ್ಟರ್ ನರಸಿಂಹ ರಾವ್. ಬಹುಕೋಟಿಯ ಅಮಲು ಪದಾರ್ಥ ಮಾರಿ ದಿಢೀರನೆ ಕುಬೇರನಾಗಿದ್ದ ರಮೇಶ್ ಈಗ ಪೊಲೀಸರ ಅತಿಥಿಯಾಗಿದ್ದಾನೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT