ಮಹಾರಾಷ್ಟ್ರ ಶಿಕ್ಷಣ ಸಚಿವ ವಿನೋದ್ ತವ್ದೆ 
ದೇಶ

ಗುತ್ತಿಗೆಯಲ್ಲಿ ಅವ್ಯವಹಾರ: ಮಹಾರಾಷ್ಟ್ರದ ಮತ್ತೊಬ್ಬ ಸಚಿವರ ಮೇಲೆ ಆರೋಪ

ಪಂಕಜ ಮುಂಡೆ ನಂತರ ಇದೀಗ ಮಹಾರಾಷ್ಟ್ರ ಸರ್ಕಾರದ ಮತ್ತೊಬ್ಬ ಸಚಿವರು ಗುತ್ತಿಗೆ ನೀಡಿಕೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ಕೇಳಿ ಬರುತ್ತಿದೆ...

ಮುಂಬೈ: ಪಂಕಜ ಮುಂಡೆ ನಂತರ ಇದೀಗ  ಮಹಾರಾಷ್ಟ್ರ ಸರ್ಕಾರದ ಮತ್ತೊಬ್ಬ ಸಚಿವರು ಗುತ್ತಿಗೆ ನೀಡಿಕೆಯಲ್ಲಿ  ಭ್ರಷ್ಟಾಚಾರ ಎಸಗಿದ ಆರೋಪ ಕೇಳಿ ಬರುತ್ತಿದೆ.

ಅಲ್ಲಿನ ಶಿಕ್ಷಣ ಸಚಿವ ವಿನೋದ್ ತವ್ದೆ ಅವರು ಇ-ಟೆಂಡರ್ ಪ್ರಕ್ರಿಯೆಯನ್ನು ಅನುಸರಿಸದೆ 191 ಕೋಟಿ ರೂಪಾಯಿ ಯೋಜನೆಯ  ಗುತ್ತಿಗೆ ನೀಡುವಲ್ಲಿ ಅವ್ಯವಹಾರ ಎಸಗಿದ್ದಾರೆ  ಎಂದು ಶಾಲಾ ಶಿಕ್ಷಣ ಇಲಾಖೆ ಆರೋಪಿಸಿದೆ. ಈ ಬಗ್ಗೆ ರಾಜ್ಯ ಹಣಕಾಸು ಇಲಾಖೆ ಸಂಪೂರ್ಣ ತನಿಖೆ ನಡೆಸಲು ಆಗ್ರಹಿಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.ಇದೇ ಸಂದರ್ಭದಲ್ಲಿ ಸಚಿವರು ನೀಡಿದ್ದ ಗುತ್ತಿಗೆಗೆ ತಡೆಹಿಡಿಯಲಾಗಿದೆ.

ಮಹಾರಾಷ್ಟ್ರದಲ್ಲಿ ಸುಮಾರು 62 ಸಾವಿರ ಸರ್ಕಾರಿ ಶಾಲೆಗಳಿಗೆ ಅಗ್ನಿಶಾಮಕ ಯಂತ್ರಗಳನ್ನು ಪೂರೈಸುವ ಗುತ್ತಿಗೆ ಇದಾಗಿತ್ತು. ಕಳೆದ ಫೆಬ್ರವರಿ 11 ರಂದು ಶಾಲಾ ಶಿಕ್ಷಣ ಮಂಡಳಿಯ ನಿರ್ದೇಶಕ ಮಹಾವೀರ್ ಮಾನೆ ಅವರಿಗೆ ಗುತ್ತಿಗೆ ಕಾರ್ಯದ ಜವಾಬ್ದಾರಿ ವಹಿಸಲಾಗಿತ್ತು. ಅವರು ಫೆಬ್ರವರಿ 27ರಂದು ಥಾಣೆ ಮೂಲದ ರಿಲೈಯಬಲ್ ಫೈರ್ ಎಂಜಿನಿಯರ್ಸ್ ಸಂಸ್ಥೆಗೆ ಗುತ್ತಿಗೆ ನೀಡಿದ್ದರು. ಹಣಕಾಸು ಇಲಾಖೆ ಗುತ್ತಿಗೆಗೆ ಅನುಮೋದನೆ ನೀಡಿರಲಿಲ್ಲ. ಸಚಿವ ತವ್ದೆ ಅವರ ಸೂಚನೆ  ಮೇರೆಗೆ ಜನವರಿ 6ರಂದು  ಆದೇಶ ಹೊರಡಿಸಲಾಗಿತ್ತು ಎಂದು ಹಣಕಾಸು ಇಲಾಖೆಯ ವರದಿಯನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಆದರೆ ಸಚಿವ ತವ್ದೆ, ಈ ಆರೋಪವನ್ನು ನಿರಾಕರಿಸಿದ್ದಾರೆ. ಹಣಕಾಸು ಇಲಾಖೆ ಗುತ್ತಿಗೆ ಆದೇಶವನ್ನು ತಡೆಹಿಡಿದಿದ್ದು, ಇದುವರೆಗೆ ಹಣ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.ಹಿಂದಿನ ಕಾಂಗ್ರೆಸ್ -ಎನ್ ಸಿಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು, ಆಗಿನ ಶಿಕ್ಷ ಣ ಸಚಿವ ರಾಜೇಂದ್ರ ದರ್ದಾ ಗುತ್ತಿಗೆಗೆ ಶಿಫಾರಸ್ಸು ನೀಡಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT