ತೆಲಂಗಾಣ ಟಿಡಿಪಿ ಶಾಸಕ ರೇವಂತ್ ರೆಡ್ಡಿ 
ದೇಶ

ವೋಟಿಗಾಗಿ ನೋಟು ಪ್ರಕರಣ: ರೇವಂತ್ ರೆಡ್ಡಿ ಸೇರಿ ಮೂವರಿಗೆ ಜಾಮೀನು

ನಾಮನಿರ್ದೇಶಿತ ಸದಸ್ಯರೊಬ್ಬರಿಗೆ ಲಂಚ ನೀಡಿ ಬಂಧನಕ್ಕೊಳಗಾಗಿದ್ದ ತೆಲಂಗಾಣ ಟಿಡಿಪಿ ಶಾಸಕ ರೇವಂತ್ ರೆಡ್ಡಿಗೆ ಹೈದರಾಬಾದ್ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರಾಗಿದೆ...

ಹೈದರಾಬಾದ್: ನಾಮನಿರ್ದೇಶಿತ ಸದಸ್ಯರೊಬ್ಬರಿಗೆ ಲಂಚ ನೀಡಿ ಬಂಧನಕ್ಕೊಳಗಾಗಿದ್ದ ತೆಲಂಗಾಣ ಟಿಡಿಪಿ ಶಾಸಕ ರೇವಂತ್ ರೆಡ್ಡಿ ಸೇರಿ ಮೂವರಿಗೆ ಹೈದರಾಬಾದ್ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ವೋಟಿಗಾಗಿ ನೋಟು ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಂತ್ ರೆಡ್ಡಿ, ಸೆಬಾಸ್ಟಿಯನ್ ಹಾಗೂ ಉದಯ್ ಕುಮಾರ್ ಸಿಂಹ ಅವರಿಗೆ ಹೈದರಾಬಾದ್ ನ್ಯಾಯಾಲಯವು ನಿಯಮಬದ್ಧ ಜಾಮೀನು ನೀಡಿದ್ದು, ಮೂವರು ಆರೋಪಿಗಳಿಂದಲೂ ನ್ಯಾಯಾಲಯವು 5 ಲಕ್ಷ ಠೇವಣಿ ಇರಿಸಿಕೊಂಡಿದ್ದು, ದೇಶದಿಂದ ಹೊರಹೋಗದಂತೆ ತಿಳಿಸಿ ಪಾಸ್ ಪೋರ್ಟ್ ನ್ನು ವಶಕ್ಕೆ ಪಡೆದುಕೊಂಡಿದೆ.

ತೆಲಂಗಾಣ ಟಿಡಿಪಿ ಶಾಸಕ ರೇವಂತ್ ರೆಡ್ಡಿ ಹಾಗೂ ಮತ್ತಿಬ್ಬರು ಆರೋಪಿಗಳು ನಾಮನಿರ್ದೇಶಿತ ಆಂಗ್ಲೋ-ಇಂಡಿಯನ್ ಸದಸ್ಯ ಸ್ಟೀಫನ್ ಗೆ 50 ಲಕ್ಷ ಹಣ ನೀಡುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದರು.

ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಟಿಡಿಪಿ ಪರ ಮತ ಹಾಕುವಂತೆ ಎಂಎಲ್ ಸಿಗೆ ಶಾಸಕ ರೇವಂತ್ ರೆಡ್ಡಿ ಅವರು ಆಮಿಷವೊಡ್ಡಿದ್ದಾರೆಂದು ಹೇಳಿ ಸ್ಟೀಫನ್ ಎಲ್ವಿನ್ ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದ ಭ್ರಷ್ಟಾಚಾರ ನಿಗ್ರಹದ ಅಧಿಕಾರಿಗಳು ರೇವಂತ್ ರೆಡ್ಡಿ ಹಾಗೂ ಮತ್ತಿಬ್ಬರು ಆರೋಪಿಗಳು  ಸ್ಟೀಫನ್ ಗೆ ಹಣ ನೀಡುವ ವೇಳೆ ಸ್ಥಳಕ್ಕೆ ಬಂದು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಆಮಿಷ ನೀಡುವ ವೇಳೆ ಸಚಿವರಿಗೆ ರೇವಂತ್ ರೆಡ್ಡಿ ಅವರು ಟಿಡಿಪಿ ಪರ ಮತ ಹಾಕಿದರೆ 5 ಕೋಟಿ ಹಣ ನೀಡುವುದಾಗಿ ಹೇಳಿದ್ದರು ಎಂದು ಹೇಳಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT