ಕಲ್ಲಿದ್ದಲು ಹಗರಣ: ದಾಖಲೆಗಳನ್ನು ಸರಿಯಾಗಿ ನೀಡಿ ಅಧಿಕಾರಿಗೆ ನ್ಯಾಯಾಲಯ ಸೂಚನೆ (ಸಾಂದರ್ಭಿಕ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ಸರಿಯಾಗಿ ದಾಖಲೆ ನೀಡಿ; ಅಧಿಕಾರಿಗೆ ನ್ಯಾಯಾಲಯ ಸೂಚನೆ

ಬಹುಕೋಟಿ ಹಗರಣ ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕುರಿತಂತೆ ಕೊರತೆ ಇರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ಸರಿಯಾದ ರೀತಿಯಲ್ಲಿ ಸಲ್ಲಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯವು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದೆ...

ನವದೆಹಲಿ: ಬಹುಕೋಟಿ ಹಗರಣ ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕುರಿತಂತೆ ಕೊರತೆ ಇರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ಸರಿಯಾದ ರೀತಿಯಲ್ಲಿ ಸಲ್ಲಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯವು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದೆ.

ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು, ಆರೋಪಿಗಳಾಗಿರುವ ಕಾಂಗ್ರೆಸ್ ನಾಯಕ ಹಾಗೂ ಉದ್ಯಮಿ ನವೀನ್ ಜಿಂದಾಲ್ ಹಾಗೂ ಇನ್ನಿತರೆ ಆರೋಪಿಗಳ ಕುರಿತಂತೆ ದಾಖಲೆಗಳ ಕೊರತೆಯಿದೆ ಎಂದು ಹೇಳಿದೆ. ಪ್ರಕರಣ ಸಂಬಂಧ ಈಗಾಗಲೇ ಅಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳು ಸರಿಯಾದ ರೀತಿಯಲ್ಲಿ ಸಂಗ್ರಹವಾಗಿಲ್ಲ. ಕೆಲವು ದಾಖಲೆಗಳು ಅಗತ್ಯವೇ ಇಲ್ಲದಿದ್ದರು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಇನ್ನು ಕೆಲವು ದಾಖಲೆಗಳು ಕಾಣೆಯಾಗಿರುವುದು ಕಂಡುಬಂದಿದೆ. ಹೀಗಾಗಿ ಅಧಿಕಾರಿಗಳು ಆರೋಪಿಗಳ ಕುರಿತಂತೆ ಕೊರತೆಯಿರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ಸರಿಯಾಗಿ ನೀಡಬೇಕು ಎಂದು ಹೇಳಿದೆ.

ಹಗರಣ ಕುರಿತಂತೆ ವಿಚಾರಣೆ ವೇಳೆ ಆರೋಪಿಗಳು ಸಿಬಿಐ ಕೇಳಿದ ಎಲ್ಲಾ ದಾಖಲೆಗಳನ್ನು ಸಿಡಿಯ ಮೂಲಕ ಸಿಬಿಐ ಅಧಿಕಾರಿಗಳಿಗೆ ನೀಡಿದ್ದೆವು ಎಂದು ಹೇಳಿದರು. ನಂತರ ಸಿಡಿಗಳನ್ನು ಪರಿಶೀಲಿಸಿದಾಗ ಆರೋಪಿಗಳು ನೀಡಿರುವ ಕೆಲವು ದಾಖಲೆಗಳು ಅಪೂರ್ಣ ಎನಿಸಿತು. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ದಾಖಲೆಗಳನ್ನು ನ್ಯಾಯಾಲಯವು ಪ್ರತಿನಿತ್ಯ ಪರಿಶೀಲಿಸುತ್ತಿರುವುದರಿಂದ ಕೆಲವು ದಾಖಲೆಗಳು ಕಾಣೆಯಾಗಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ. ಹೀಗಾಗಿ ಈ ಕುರಿತ ವಿಚಾರಣೆಗೆ ಮತ್ತಷ್ಟು ಸಮಯ ಬೇಕಿದೆ ಎಂದು ಹಿರಿಯ ವಕೀಲ ರಮೇಶ್ ಗುಪ್ತಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT