ಮಧ್ಯ ಪ್ರದೇಶ ಗೃಹ ಸಚಿವ ಬಾಬುಲಾಲ್ ಗೌರ್ 
ದೇಶ

ಹುಟ್ಟಿದವನು ಸಾಯಲೇಬೇಕು: ಮ.ಪ್ರ.ಸಚಿವ ಗೌರ್ ಹೇಳಿಕೆ

ಮಧ್ಯಪ್ರದೇಶ ಸರ್ಕಾರದ ಪಾಲಿಗೆ ಕಂಟಕವಾಗಿ ಪರಿಣಮಿಸಿರುವ ವ್ಯಾಪಂ ಹಗರಣದ ಆರೋಪಿಗಳ ಸಾವಿನಲ್ಲಿ ಅನುಮಾನ ಪಡುವಂಥದ್ದೇನಿಲ್ಲ. ಅದೆಲ್ಲ ಸಹಜ ಸಾವು. ಹುಟ್ಟಿದವನು ಸಾಯಲೇಬೇಕು..

ನವದೆಹಲಿ: ಮಧ್ಯಪ್ರದೇಶ ಸರ್ಕಾರದ ಪಾಲಿಗೆ ಕಂಟಕವಾಗಿ ಪರಿಣಮಿಸಿರುವ ವ್ಯಾಪಂ ಹಗರಣದ ಆರೋಪಿಗಳ ಸಾವಿನಲ್ಲಿ ಅನುಮಾನ ಪಡುವಂಥದ್ದೇನಿಲ್ಲ. ಅದೆಲ್ಲ ಸಹಜ ಸಾವು. ಹುಟ್ಟಿದವನು ಸಾಯಲೇಬೇಕು. ಕಳೆದೊಂದು ವಾರದಲ್ಲಿ ಮೃತಪಟ್ಟ ಇಬ್ಬರು ಆರೋಪಿಗಳ ಸಾವಿನ ಕುರಿತು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಧ್ಯಪ್ರದೇಶ ಗೃಹ ಸಚಿವ
ಬಾಬುಲಾಲ್ ಗೌರ್ ಹೇಳಿದ್ದಾರೆ.

ದೇಶದ ಅತಿದೊಡ್ಡ ನೇಮಕ ಹಗರಣವಾಗಿ ಪರಿಗಣಿತರುವ ವ್ಯಾಪಂ ಹಗರಣಕ್ಕೆ ಸಂಬಂಧಿಸಿ ಸರ್ಕಾರ ಸಿಬಿಐ ತನಿಖೆ ಆಗ್ರಹಿಸಬೇಕು ಎಂದು ಒತ್ತಾಯಿಸಿತ್ತು. ಆದರೆ, ಈ ಒತ್ತಾಯವನ್ನೂ ಸಚಿವರು ತಿರಸ್ಕರಿಸಿದ್ದಾರೆ. ಈಗಾಗಲೇ ನಡೆಯುತ್ತಿರುವ ತನಿಖೆ ಸರಿಯಾದ ದಾರಿಯಲ್ಲಿ  ಸಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಮತ್ತೆ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

2 ದಿನಗಳ ಹಿಂದಷ್ಟೇ ಹಗರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‍ಐಟಿ)ಯು ಮಧ್ಯಪ್ರದೇಶ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಆರೋಪ ಎದುರಿಸುತ್ತಿದ್ದವರಲ್ಲಿ ಈವರೆಗೆ 23 ಅಸುನೀಗಿದ್ದಾರೆ ಎಂದು ವರದಿ ನೀಡಿತ್ತು. ಇದಾದ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳು ಮೃತಪಟ್ಟಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಈ ರೀತಿ ಸತ್ತವರ ಸಂಖ್ಯೆ 25 ಅಲ್ಲ 40 ದಾಟಿದೆ ಎನ್ನುವ ವಾದಗಳೂ ಇವೆ. ಆದರೆ ಅಧಿಕೃತವಾಗಿ 25 ಹೆಸರಷ್ಟೇ ಬಹಿರಂಗಗೊಂಡಿವೆ ಎನ್ನಲಾಗುತ್ತಿದೆ. ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಅವರು, ಆರೋಪಿಗಳ ಸರಣಿ ಸಾವಿನ ಕುರಿತು ಸುಪ್ರೀಂಕೋರ್ಟ್ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT