ಜಯಲಲಿತಾ 
ದೇಶ

ಕೇರಳದಲ್ಲಿ ಕಾಂಗ್ರೆಸ್, ತ್ರಿಪುರಾದಲ್ಲಿ ಸಿಪಿಎಂ

ತಮಿಳುನಾಡು ಸಿಎಂ ಜಯಲಲಿತಾಗೆ ಭರ್ಜರಿ ಗೆಲವಿನ ಸಂಭ್ರಮ...

ನವದೆಹಲಿ: ಕೇರಳ, ಮಧ್ಯಪ್ರದೇಶ, ತ್ರಿಪುರಾ ಹಾಗೂ ಮೇಘಾಲಯದಲ್ಲೂ ಉಪಚುನಾವಣೆ ನಡೆದಿತ್ತು. ಎಲ್ಲ 5 ರಾಜ್ಯಗಳ ಫಲಿತಾಂಶವೂ ಮಂಗಳವಾರವೇ ಪ್ರಕಟವಾಗಿದೆ.
ಕೇರಳದ ಅರುವಿಕ್ಕಾರಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೆ.ಎಸ್. ಶಬರಿನಾಥನ್ ಅವರು ಜಯಭೇರಿ ಬಾರಿಸಿದ್ದು, ಆಡಳಿತಾರೂಢ ಯುಡಿಎಫ್ ಸರ್ಕಾರಕ್ಕೆ ಜಯ ಸಿಕ್ಕಂತಾಗಿದೆ. ಮಧ್ಯಪ್ರದೇಶದ ಗರೋತ್ ವಿಧಾನಸಭಾ ಸೀಟನ್ನು ಬಿಜೆಪಿ ಉಳಿಸಿಕೊಂಡಿದೆ. ಇಲ್ಲಿ ಬಿಜೆಪಿಯ ಚಂದರ್ ಸಿಂಗ್ ಸಿಸೋಡಿಯಾ ಅವರು ಕಾಂಗ್ರೆಸ್‍ನ ಸುಭಾಶ್ ಕುಮಾರ್ ಸೊಜಾತಿಯಾರನ್ನು ಸೋಲಿಸಿದ್ದಾರೆ. ಇದೇ ವೇಳೆ, ತ್ರಿಪುರಾದಲ್ಲಿ ಎರಡೂ ಸೀಟುಗಳು ಸಿಪಿಎಂ ಪಾಲಾಗಿವೆ. ಮೇಘಾಲಯದ ಚೋಕ್ ಪಾಟ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.
ಉಪಚುನಾವಣೆ ಜಯಾ ಜಯಭೇರಿ, ಠೇವಣಿ ಕಳೆದುಕೊಂಡ ಸಿಪಿಐನ ಸಿ.ಮಹೇಂದ್ರನ್
ತಮಿಳುನಾಡು ಸಿಎಂ ಜಯಲಲಿತಾಗೆ ಭರ್ಜರಿ ಗೆಲವಿನ ಸಂಭ್ರಮ. ತಮಿಳುನಾಡಿನ ಆರ್.ಕೆ.ನಗರ ಉಪಚುನಾವಣೆ ಯಲ್ಲಿ ಜಯಲಲಿತಾ ಅವರು 1,50,722 ಮತಗಳ ಅಂತರದಿಂದ ಜಯಸಾ„ಸಿದ್ದಾರೆ. ಇತರೆ ಅಭ್ಯರ್ಥಿಗಳಂತೆ ಜಯಾ ಅವರ ಪ್ರತಿಸ್ಪರ್ಧಿ ಸಿಪಿಐನ ಸಿ. ಮಹೇಂದ್ರನ್ ಠೇವಣಿ ಕಳೆದುಕೊಂಡಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಮಾತನಾಡಿದ ಜಯಾ, ``ಇದೊಂದು ಐತಿಹಾಸಿಕ ಗೆಲವು. ಮತದಾರರ ನಿರೀಕ್ಷೆ, ಅಗತ್ಯಗಳನ್ನು ಪೂರೈಸಲು ಅವಿರತವಾಗಿ ಶ್ರಮಿಸುತ್ತೇನೆ ಎಂದಿದ್ದಾg. ಫಲಿತಾಂಶ ಹೊರಬೀಳುತ್ತಿದ್ದಂತೆ ತ.ನಾಡಿನಾದ್ಯಂತ ಹಬ್ಬದ ವಾತಾವರಣ ಮನೆ ಮಾಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT