ಪ್ರಮುಖ ನಗರಗಳಲ್ಲಿ ಬಿಸಿಗಾಳಿ 
ದೇಶ

ಬಿಸಿಗಾಳಿಗೆ ಬೆಂಗಳೂರು ಸೇರಿ 5 ನಗರಗಳಲ್ಲಿ ಗರಿಷ್ಠ ಸಾವು ಸಾಧ್ಯತೆ

ಬೆಂಗಳೂರು ಸೇರಿದಂತೆ ಭಾರತದ 5 ಪ್ರಮುಖ ನಗರಗಳಲ್ಲಿ 2020ರ ವೇಳೆಗೆ ಬಿಸಿಗಾಳಿಯು ಅತಿಹೆಚ್ಚು ಮಂದಿ ಯನ್ನು ಬಲಿತೆಗೆದುಕೊಳ್ಳಲಿದೆ.

ನವದೆಹಲಿ: ಬೆಂಗಳೂರು ಸೇರಿದಂತೆ ಭಾರತದ 5 ಪ್ರಮುಖ ನಗರಗಳಲ್ಲಿ 2020ರ ವೇಳೆಗೆ ಬಿಸಿಗಾಳಿಯು ಅತಿಹೆಚ್ಚು ಮಂದಿ ಯನ್ನು ಬಲಿತೆಗೆದುಕೊಳ್ಳಲಿದೆ.
ಐಐಎಂ ಅಹಮದಾಬಾದ್, ಐಐಟಿ ಗಾಂಧಿನಗರ ಮತ್ತು ಇಂಧನ, ಪರಿಸರ ಮತ್ತು ಜಲಮಂಡಳಿ ಜಂಟಿಯಾಗಿ ನಡೆಸಿದ ಅಧ್ಯಯನವು ಈ ಆತಂಕಕಾರಿ ಅಂಶವನ್ನು ಬಹಿರಂಗ ಪಡಿಸಿದೆ. ಅಹಮದಾಬಾದ್, ಕೋಲ್ಕತಾ, ಬೆಂಗಳೂರು, ದೆಹಲಿ ಮತ್ತು ಮುಂಬೈನಲ್ಲಿ 2020ರ ವೇಳೆಗೆ ಬಿಸಿಗಾಳಿಯಿಂದಾಗಿ ಗರಿಷ್ಠ ಸಂಖ್ಯೆಯ ಜನ ಮೃತಪಡುವ ಸಾಧ್ಯತೆಯಿದೆ ಎಂದು ಈ ಅಧ್ಯಯನ ತಿಳಿಸಿದೆ. ಇದಕ್ಕಾಗಿ ಭಾರತದ ವೈವಿಧ್ಯ ಹವಾಮಾನವಿರುವ ಹಾಗೂ 10 ಲಕ್ಷದಷ್ಟು ಜನಸಂಖ್ಯೆಯಿರುವ 52 ನಗರ ಪ್ರದೇಶ ಗಳನ್ನು ಆಯ್ದು ಕೊಳ್ಳಲಾಗಿತ್ತು ಎಂದು ಆಂಗ್ಲ ಪತ್ರಿಕೆ ವರದಿ ಮಾಡಿದೆ.
``ನಮ್ಮ ಜನಪ್ರತಿನಿಧಿಗಳು ಹವಾಮಾನ ಬದಲಾವಣೆಗೆ ಏನು ಮಾಡಬೇಕೆಂದು ಯೋಜನೆ ರೂಪಿಸಬೇಕು ಮತ್ತು ಪ್ರತಿಕ್ರಿಯಿಸುವಂತಾಗಬೇಕು. ನಾವು ದೈನಂದಿನ ಸಾವು, ಹವಾಮಾನ, ಆರ್ದ್ರತೆ ಮತ್ತು ಮಾಲಿನ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂಕಿಅಂಶದ ಮಾದರಿಯನ್ನು ಸಿದ್ಧಪಡಿಸಿ ದ್ದೇವೆ. ಈ ಮೂಲಕ ತಾಪಮಾನ ಬದಲಾವಣೆಗೆ ಅನುಗುಣವಾಗಿ ಸಾವಿನ ರಿಸ್ಕ್ ಹೇಗೆ ಬದಲಾಗುತ್ತದೆ ಎಂದು ಕಂಡು ಕೊಂಡಿದ್ದೇವೆ'' ಎಂದು ಅಧ್ಯಯನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಎಂ.ಎಚ್. ಧೊಲಾಕಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT