ಪ್ರಮುಖ ನಗರಗಳಲ್ಲಿ ಬಿಸಿಗಾಳಿ 
ದೇಶ

ಬಿಸಿಗಾಳಿಗೆ ಬೆಂಗಳೂರು ಸೇರಿ 5 ನಗರಗಳಲ್ಲಿ ಗರಿಷ್ಠ ಸಾವು ಸಾಧ್ಯತೆ

ಬೆಂಗಳೂರು ಸೇರಿದಂತೆ ಭಾರತದ 5 ಪ್ರಮುಖ ನಗರಗಳಲ್ಲಿ 2020ರ ವೇಳೆಗೆ ಬಿಸಿಗಾಳಿಯು ಅತಿಹೆಚ್ಚು ಮಂದಿ ಯನ್ನು ಬಲಿತೆಗೆದುಕೊಳ್ಳಲಿದೆ.

ನವದೆಹಲಿ: ಬೆಂಗಳೂರು ಸೇರಿದಂತೆ ಭಾರತದ 5 ಪ್ರಮುಖ ನಗರಗಳಲ್ಲಿ 2020ರ ವೇಳೆಗೆ ಬಿಸಿಗಾಳಿಯು ಅತಿಹೆಚ್ಚು ಮಂದಿ ಯನ್ನು ಬಲಿತೆಗೆದುಕೊಳ್ಳಲಿದೆ.
ಐಐಎಂ ಅಹಮದಾಬಾದ್, ಐಐಟಿ ಗಾಂಧಿನಗರ ಮತ್ತು ಇಂಧನ, ಪರಿಸರ ಮತ್ತು ಜಲಮಂಡಳಿ ಜಂಟಿಯಾಗಿ ನಡೆಸಿದ ಅಧ್ಯಯನವು ಈ ಆತಂಕಕಾರಿ ಅಂಶವನ್ನು ಬಹಿರಂಗ ಪಡಿಸಿದೆ. ಅಹಮದಾಬಾದ್, ಕೋಲ್ಕತಾ, ಬೆಂಗಳೂರು, ದೆಹಲಿ ಮತ್ತು ಮುಂಬೈನಲ್ಲಿ 2020ರ ವೇಳೆಗೆ ಬಿಸಿಗಾಳಿಯಿಂದಾಗಿ ಗರಿಷ್ಠ ಸಂಖ್ಯೆಯ ಜನ ಮೃತಪಡುವ ಸಾಧ್ಯತೆಯಿದೆ ಎಂದು ಈ ಅಧ್ಯಯನ ತಿಳಿಸಿದೆ. ಇದಕ್ಕಾಗಿ ಭಾರತದ ವೈವಿಧ್ಯ ಹವಾಮಾನವಿರುವ ಹಾಗೂ 10 ಲಕ್ಷದಷ್ಟು ಜನಸಂಖ್ಯೆಯಿರುವ 52 ನಗರ ಪ್ರದೇಶ ಗಳನ್ನು ಆಯ್ದು ಕೊಳ್ಳಲಾಗಿತ್ತು ಎಂದು ಆಂಗ್ಲ ಪತ್ರಿಕೆ ವರದಿ ಮಾಡಿದೆ.
``ನಮ್ಮ ಜನಪ್ರತಿನಿಧಿಗಳು ಹವಾಮಾನ ಬದಲಾವಣೆಗೆ ಏನು ಮಾಡಬೇಕೆಂದು ಯೋಜನೆ ರೂಪಿಸಬೇಕು ಮತ್ತು ಪ್ರತಿಕ್ರಿಯಿಸುವಂತಾಗಬೇಕು. ನಾವು ದೈನಂದಿನ ಸಾವು, ಹವಾಮಾನ, ಆರ್ದ್ರತೆ ಮತ್ತು ಮಾಲಿನ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂಕಿಅಂಶದ ಮಾದರಿಯನ್ನು ಸಿದ್ಧಪಡಿಸಿ ದ್ದೇವೆ. ಈ ಮೂಲಕ ತಾಪಮಾನ ಬದಲಾವಣೆಗೆ ಅನುಗುಣವಾಗಿ ಸಾವಿನ ರಿಸ್ಕ್ ಹೇಗೆ ಬದಲಾಗುತ್ತದೆ ಎಂದು ಕಂಡು ಕೊಂಡಿದ್ದೇವೆ'' ಎಂದು ಅಧ್ಯಯನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಎಂ.ಎಚ್. ಧೊಲಾಕಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT