ಧೀರೂಭಾಯ್ ಅಂಬಾನಿ ಮತ್ತು ಅವರ ಪುತ್ರರು 
ದೇಶ

ಪಠ್ಯವಾಗಲಿರುವ ಅಂಬಾನಿ ಜೀವನಗಾಥೆ

ದೇಶದ ಖ್ಯಾತ ಉದ್ಯಮಿ ರಿಲಯನ್ಸ್ ಸಮೂಹದ ಸಂಸ್ಥಾಪಕ ಧೀರೂಭಾಯ್ ಅಂಬಾನಿಯ ಕುರಿತು ಒಂದು ಪಾಠವನ್ನು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಚಿಂತಿಸುತ್ತಿದೆ.

ಅಹ್ಮದಾಬಾದ್: ದೇಶದ ಖ್ಯಾತ ಉದ್ಯಮಿ ರಿಲಯನ್ಸ್ ಸಮೂಹದ ಸಂಸ್ಥಾಪಕ ಧೀರೂಭಾಯ್ ಅಂಬಾನಿಯ ಕುರಿತು ಒಂದು ಪಾಠವನ್ನು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಚಿಂತಿಸುತ್ತಿದೆ.
ಸಮಾಜಕ್ಕೆ ಗಣನೀಯ ಕೊಡುಗೆ ನೀಡಿದ ಖ್ಯಾತವೆತ್ತರ ಕುರಿತು ಮಕ್ಕಳು ತಿಳಿಯಬೇಕು. ಹೀಗಾಗಿ ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕಿದೆ ಎಂದು ಶಿಕ್ಷಣ ಸಚಿವ ಭುಪೇಂದ್ರ ಹೇಳಿದ್ದಾರೆ.
ಅಂತೆಯೇ ರಿಲಯನ್ಸ್  ಸಂಸ್ಥಾಪಕ  ಧೀರೂಭಾಯ್ ಅಂಬಾನಿ , ದೇನಾ ಬ್ಯಾಂಕ್ ಸಂಸ್ಥಾಪಕ ದೇವಕರಣ್ ನಂಜಿ ಮತ್ತಿತರರ ಜೀವನ ಚರಿತ್ರೆಗಳನ್ನು ಪಠ್ಯಾಂಶಗಳನ್ನಾಗಿಸಲು ಗುಜರಾತ್ ಸರ್ಕಾರ ಯೋಜಿಸಿದೆ. 9 ರಿಂದ 12ನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಪಠ್ಯಾಂಶವಾಗಿಸಲು ಹಾಗೂ 6 ರಿಂದ 8ನೇ ತರಗತಿವರೆಗೆ ಜನರಲ್ ನಾಲೆಡ್ಜ್‌ ಪುಸ್ತಕಗಳಲ್ಲಿ ಧೀರೂಭಾಯ್ ಹಾಗೂ ದೇವಕರಣ್ ನಂಜಿ  ಕುರಿತ ಜೀವನವನ್ನು ಪಠ್ಯಾಂಶವಾಗಿಸಲು ಗುಜರಾತ್ ರಾಜ್ಯದ ಸ್ಕೂಲ್ ಟೆಕ್ಸ್ಟ್ ಬುಕ್ ಬೋರ್ಡ್‌ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ಮಕ್ಕಳಲ್ಲಿ ಉದ್ಯಮಶೀಲತೆ ಹಾಗೂ ದೊಡ್ಡಮಟ್ಟದ ಕನಸುಗಳನ್ನು ಕಾಣಲು ಅಂಬಾನಿ ಬದುಕು ಸ್ಫೂರ್ತಿದಾಯಕವಾಗ ಬಲ್ಲದು ಎಂಬ ವಿಶ್ವಾಸ ಸರ್ಕಾರ ಹೊಂದಿದ್ದು, ರಾಜ್ಯದ ಶಿಕ್ಷಣ ಸಚಿವ ಭೂಪೇಂದ್ರಸಿನ್ಹ್ ಚುದಸ್ಮ ಈ ಯೋಜನೆ ಯನ್ನು ಶಿಕ್ಷಣ ಇಲಾಖೆಯೊಂದಿಗೆ ಹಂಚಿ ಕೊಂಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT