ಮಹಾರಾಷ್ಟ್ರ ಸಚಿವ ವಿನೋದ್ ತಾವ್ಡೆ 
ದೇಶ

ಮಹಾರಾಷ್ಟ್ರ: ಮತ್ತೊಬ್ಬ ಸಚಿವಗೂ ತಟ್ಟಿದ ಕಳಂಕ

ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೊಸ ವಿವಾದ ಅಂಟಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಡೆ ವಿವಾದದ ಬೆನ್ನಲ್ಲೇ ಈಗ ಶಿಕ್ಷಣ ಸಚಿವ ವಿನೋದ್ ತಾವ್ಡೆ ವಿರುದ್ಧವೂ ಅಂತಹುದೇ ಅವ್ಯವಹಾರ ಆರೋಪ ಕೇಳಿಬಂದಿದೆ...

ಮುಂಬೈ: ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೊಸ ವಿವಾದ ಅಂಟಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಡೆ ವಿವಾದದ ಬೆನ್ನಲ್ಲೇ ಈಗ ಶಿಕ್ಷಣ ಸಚಿವ  ವಿನೋದ್ ತಾವ್ಡೆ ವಿರುದ್ಧವೂ ಅಂತಹುದೇ ಅವ್ಯವಹಾರ ಆರೋಪ ಕೇಳಿಬಂದಿದೆ.
ಟೆಂಡರ್ ಕರೆಯದೇ ಅವರು ರು191 ಕೋಟಿಯ ಗುತ್ತಿಗೆಯನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದನ್ನು ತಾವ್ಡೆ ಅವರು ತಳ್ಳಿಹಾಕಿದ್ದಾರೆ. ಪ್ರಕರಣವನ್ನು ಗಣನೆಗೆ ತೆಗೆದುಕೊಂಡಿರುವ  ಹಣಕಾಸು ಇಲಾಖೆಯ ಅವ್ಯವಹಾರದ ತನಿಖೆಗೆ ಮುಂದಾಗಿದೆ.
ಅಗ್ನಿಶಾಮಕ ಖರೀದಿ ಅವ್ಯವಹಾರ
ಫೆ.11ರಂದು ರಾಜ್ಯಾದ್ಯಂತ ಇರುವ ಜಿಲ್ಲಾ ಪರಿಷತ್ ಶಾಲೆಗಳಿಗೆ 62,105 ಅಗ್ನಿಶಾಮಕಗಳ ಖರೀದಿಸುವಂತೆ ಶಿಕ್ಷಣ ನಿರ್ದೇಶಕರಿಗೆ ಹಣಕಾಸು ಇಲಾಖೆ ಆದೇಶಿಸಿತ್ತು. ಆದರೆ, ಇ-ಟೆಂಡರ್  ಕರೆಯದೇ ಗುತ್ತಿಗೆ ನೀಡಲಾಗಿತ್ತು. ಆ ಗುತ್ತಿಗೆಗೆ ಸಚಿವ ತಾವ್ಡೆ ಅಂಕಿತ ಹಾಕಿದ್ದರೂ, ಹಣಕಾಸು ಇಲಾಖೆ ಆಕ್ಷೇಪವೆತ್ತಿದ ಕಾರಣ ಅದು ಸ್ಥಗಿತಗೊಂಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ತಾವ್ಡೆ,  ``ಗುತ್ತಿಗೆದಾರರಿಗೆ ಒಂದೇ ಒಂದು ರುಪಾಯಿಯನ್ನೂ ನೀಡಿಲ್ಲ. ಹಣಕಾಸು ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದ ತಕ್ಷಣವೇ ಆದೇಶಕ್ಕೆ ತಡೆ ತಂದಿದ್ದೇವೆ'' ಎಂದಿದ್ದಾರೆ.
ಅಗ್ನಿಶಾಮಕ ಖರೀದಿಗೆ ನಮ್ಮ ಶಿಕ್ಷಣ ಇಲಾಖೆಯಲ್ಲಿರುವ ಬಜೆಟ್ ರು.18 ಕೋಟಿ. ಆದರೆ ನನ್ನ ವಿರುದ್ಧ 191 ಕೋಟಿಯ ಆರೋಪ ಹೊರಿಸಿದ್ದಾರೆ. ನಾವು 6 ಕೋಟಿಯ ಉಪಕರಣಗಳನ್ನು  ನೀಡಿದ್ದೇವೆ. ಈ ಪೈಕಿ ಒಂದೇ ಒಂದು ರುಪಾಯಿಯನ್ನೂ ಗುತ್ತಿಗೆದಾರರಿಗೆ ನೀಡಿಲ್ಲ.
-ವಿನೋದ್ ತಾವ್ಡೆ, ಶಿಕ್ಷಣ ಸಚಿವ
ನಿಮ್ಮೆಲ್ಲರ ವಿಶ್ವಾಸ ಮತ್ತು ಬೆಂಬಲದ ಮೂಲಕ ನಾನು ನನ್ನ ವಿರುದ್ಧದ ಸಂಚನ್ನು ಬಹಿರಂಗಪಡಿಸುತ್ತೇನೆ.
-ಪಂಕಜಾ ಮುಂಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT