ಸಂಜಯ್ ಸಿಂಗ್ 
ದೇಶ

ತೀವ್ರಗೊಂಡ ಆಪ್ ಆಂತರಿಕ ಬಿಕ್ಕಟ್ಟು, ಕೇಜ್ರಿವಾಲ್ ಪದಚ್ಯುತಿಗೆ ಯತ್ನ

ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಈ ಸಂಬಂಧ ಚರ್ಚಿಸಲು ಮಾರ್ಚ್ 4ರಂದು ಆಪ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಈ ಸಂಬಂಧ ಚರ್ಚಿಸಲು ಮಾರ್ಚ್ 4ರಂದು ಆಪ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ಈ ಕುರಿತು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಪ್ ವಕ್ತಾರ ಸಂಜಯ್ ಸಿಂಗ್, ಆಪ್ ಆಂತರಿಕ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟನೆ ನೀಡಿದರು. ಅಲ್ಲದೆ ಆಂತರಿಕ ಬಿಕ್ಕಟ್ಟಿನಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದರು.

ಇದೇ ವೇಳೆ ಪಕ್ಷದ ಮುಖಂಡರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರು ಅರವಿಂದ್ ಕೇಜ್ರಿವಾಲ್ ಅವರ ಪದಚ್ಯುತಿಗೆ ಯತ್ನಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ನೂತನ ರಾಷ್ಟ್ರೀಯ ಸಂಚಾಲಕರ ನೇಮಕದ ಬಗ್ಗೆಯೂ ಕಾರ್ಯಕಾರಣಿಯಲ್ಲಿ ಚರ್ಚಿಸಲಾಗುವುದು ಎಂದು ಸಂಜಯ್ ಸಿಂಗ್ ತಿಳಿಸಿದರು.

ಇತ್ತೀಗಷ್ಟೇ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಇಬ್ಬರೂ ಕೇಜ್ರಿವಾಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಎಎಪಿ 'ಒಬ್ಬ ವ್ಯಕ್ತಿಯ ಪಕ್ಷ'ವಾಗುತ್ತಿದೆ ಎಂದು ಭೂಷಣ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರಶಾಂತ್‌ ಭೂಷಣ್‌ ಮತ್ತು ಯಾದವ್‌  ಅವರು ಆಮ್‌ ಆದ್ಮಿ ಪಕ್ಷದ ಕಾರ್ಯದರ್ಶಿಗೆ ಬರೆದ ಪತ್ರ ಗಳು ಬಹಿರಂಗವಾಗಿದ್ದು ಪತ್ರದಲ್ಲಿ ಪಕ್ಷದಲ್ಲಿ ಎಲ್ಲವೂ ಏಕಪಕ್ಷಿಯವಾಗಿ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT