ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರದಲ್ಲಿ ಎಚ್‌1ಎನ್‌1ಗೆ ಉಚಿತ ಚಿಕಿತ್ಸೆ

ಮಾರಕ ಎಚ್‌1ಎನ್‌1 ರೋಗಕ್ಕೆ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್...

ಮುಂಬೈ: ಮಾರಕ ಎಚ್‌1ಎನ್‌1 ರೋಗಕ್ಕೆ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸೂಚಿಸಿದ್ದಾರೆ.

ದೇಶಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಮಾರಕ ಹಂದಿ ಜ್ವರಕ್ಕೆ ಮಹಾರಾಷ್ಟ್ರದ ಜನತೆ ತತ್ತರಿಸಿ ಹೋಗಿದ್ದು, ಎಲ್ಲ ರೋಗಿಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ.

ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಎಚ್‌1ಎನ್‌1 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಮೂಲಕ ಸೂಚಿಸಲಾಗಿದ್ದು, ಈ ನಿಟ್ಟಿನಲ್ಲಿ ಬರುವ ಎಲ್ಲ ಖರ್ಚುವೆಚ್ಚಗಳನ್ನು ಮಹಾರಾಷ್ಟ್ರ ಸರ್ಕಾರವೇ ಭರಿಸಲಿದೆ. ಖಾಸಗಿ ಆಸ್ಪತ್ರೆಗಳು ಹಂದಿ ಜ್ವರ ಕಾಯಿಲೆಯಿಂದ ಬಳಲುವವರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳುವಂತಿಲ್ಲ . ಈ ಸಂಬಂಧ ತಗಲುವ ಎಲ್ಲ ಖರ್ಚುಗಳನ್ನು ಸರ್ಕಾರವೇ ಭರಿಸಲಿದೆ ಎಂದು ಫ‌ಡ್ನವೀಸ್‌ ಮಾಧ್ಯಮಗಳಿಗೆ ತಿಳಿಸಿದರು.

ಇನ್ನು ಮುಂಬೈನಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತಂದಿದ್ದು, ಮಳೆಯಿಂದ ಎಚ್‌1ಎನ್‌1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಆವರಿಸಿದೆ. ರಾಜ್ಯದಲ್ಲಿನ ಶೇ.90ರಷ್ಟು ಎಚ್1ಎನ್1 ರೋಗಿಗಳು ಮುಂಬಯಿ, ಪುಣೆ, ನಾಗಪುರ, ಔರಂಗಾಬಾದ್‌ ಮತ್ತು ಲಾತೂರ್‌ನವರಾಗಿದ್ದಾರೆ. ಈ ಪ್ರದೇಶದಲ್ಲಿನ ದಿನದ ಉಷ್ಣಾಂಶ ಇದ್ದಕ್ಕಿಂದ್ದಂತೆಯೇ ಕುಸಿದಿದ್ದು, ಈ ಪ್ರದೇಶಗಳಲ್ಲಿ ಹಂದಿ ಜ್ವರ ಸೋಂಕು ಇನ್ನಷ್ಟು ವ್ಯಾಪಿಸುವ ಸಾಧ್ಯತೆ ಇದೆ.

ರಾಜ್ಯ ಆರೋಗ್ಯ ಇಲಾಖೆಯನ್ನು ಈ ನಿಟ್ಟಿನಲ್ಲಿ ಕಟ್ಟೆಚ್ಚರದಲ್ಲಿ ಇರಿಸಲಾಗಿದ್ದು, ಖಾಸಗಿ ಸಹಿತ ಎಲ್ಲ ಆಸ್ಪತ್ರೆಗಳಲ್ಲಿ ಎಲ್ಲ ಹಂದಿಜ್ವರ ರೋಗಿಗಳಿಗೆ, ಸೋಂಕು ತಗಲಿದವರಿಗೆ, ಉಚಿತವಾಗಿ ಚಿಕಿತ್ಸೆ ನೀಡುವಂತೆ ಆದೇಶಿಸಲಾಗಿದೆ ಎಂದು ಫ‌ಡ್ನವೀಸ್‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT