ನಟ ಸಲ್ಮಾನ್ ಖಾನ್ (ಸಂಗ್ರಹ ಚಿತ್ರ) 
ದೇಶ

ಹಿಟ್ ಅಂಡ್ ರನ್ ಪ್ರಕರಣ: ಸಲ್ಮಾನ್ ಖಾನ್ ಗೆ ತಾತ್ಕಾಲಿಕ ರಿಲೀಫ್

2002ರ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು..

ಮುಂಬೈ: 2002ರ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸಲ್ಮಾನ್ ಖಾನ್ ಡ್ರೈವಿಂಗ್ ಲೈಸೆನ್ಸ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ಪ್ರಾಸಿಕ್ಯೂಷನ್ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

2002ರ ಹಿಟ್ ಅಂಡ್ ರನ್ ಪ್ರಕರಣದ ಸಮಯದಲ್ಲಿ ನಟ ಸಲ್ಮಾನ್ ಖಾನ್ ಅವರೇ ಕಾರನ್ನು ಚಲಾಯಿಸುತ್ತಿದ್ದರು. ಹೀಗಾಗಿ ಸಲ್ಮಾನ್ ಖಾನ್ ತಮ್ಮ ಚಾಲನಾ ಪರವಾನಗಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೆಷನ್ಸ್ ಕೋರ್ಟ್ ಗೆ ಪ್ರಾಸಿಕ್ಯೂಷನ್ ಮನವಿ ಮಾಡಿಕೊಂಡಿತ್ತು. ಆದರೆ ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿಡಬ್ಲ್ಯು ದೇಶಪಾಂಡೆ ಅವರು ಅರ್ಜಿಯನ್ನು ವಜಾಗೊಳಿಸಿದರು.

'ಪ್ರಾಸಿಕ್ಯೂಷನ್ ಅರ್ಜಿ ಇಂಡಿಯನ್ ಎವಿಡೆನ್ಸ್ ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ. ಹಾಗಾಗಿ ಆರೋಪಿ ಚಾಲನಾ ಪರವಾನಗಿಯನ್ನು ಸಲ್ಲಿಸಬೇಕೆಂದು ನ್ಯಾಯಾಲಯ ಬಲವಂತ ಮಾಡಲು ಬರುವುದಿಲ್ಲ. ಸೂಕ್ತವಾದ ಸಮಯದಲ್ಲಿ ಆರೋಪಿಯೇ ಸ್ವಇಚ್ಚೆಯಿಂದ ತನ್ನ ಲೈಸೆನ್ಸ್ ಅನ್ನು ಕೊಡಬೇಕು. ಈ ನಿಟ್ಟಿನಲ್ಲಿ ನ್ಯಾಯಾಲಯ ದಾಖಲೆಯನ್ನು ಸಲ್ಲಿಸಿ ಎಂದು ನಿರ್ದೇಶನ ನೀಡಲು ಸಾಧ್ಯವಿಲ್ಲ' ಎಂದು ನ್ಯಾಯಮೂರ್ತಿ ದೇಶಪಾಂಡೆ ಅವರು ಮೌಖಿಕವಾಗಿ ತಿಳಿಸಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಫೆಬ್ರವರಿ 27ರಂದು ಪರ ಮತ್ತು ಪ್ರತಿವಾದಿ ವಕೀಲರ ವಾದವನ್ನು ಆಲಿಸಿ, ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

2002 ಸೆಪ್ಚೆಂಬರ್ 28ರ ರಾತ್ರಿ ಬಾಂದ್ರಾದಲ್ಲಿ ನಟ ಸಲ್ಮಾನ್ ಖಾನ್ ಅವರ ಕಾರು ಫುಟ್ ಪಾತ್ ಮೇಲೆ ಚಲಿಸಿ ಅಲ್ಲಿ ಮಲಗಿದ್ದವರ ಮೇಲೆ ಹರಿದಿತ್ತು. ಈ ವೇಳೆ ಓರ್ವ ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ನಟ ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲಾಗಿದ್ದು, ಆರೋಪ ಸಾಬೀತಾದರೆ ನಟನಿಗೆ 10 ವರ್ಷ ಕಠಿಣ ಕಾರಾಗೃಹ ಸೆರೆವಾಸ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT