ಶಿಮ್ಲಾದಲ್ಲಿ ಭಾರಿ ಹಿಮಪಾತ 
ದೇಶ

ಅಕಾಲಿಕ ಮಳೆ, ಹಿಮಪಾತಕ್ಕೆ ಇಬ್ಬರು ಬಲಿ

ಉತ್ತರ ಭಾರತದ ಅನೇಕ ನಗರಗಳು ಹಿಮಪಾತ, ಮಳೆಯಿಂದ ತತ್ತರಿಸಿದೆ. ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತಲೂ ಕೆಳಮಟ್ಟಕ್ಕಿಳಿದಿದ್ದು...

ನವದೆಹಲಿ: ಉತ್ತರ ಭಾರತದ ಅನೇಕ ನಗರಗಳು ಹಿಮಪಾತ, ಮಳೆಯಿಂದ ತತ್ತರಿಸಿದೆ. ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತಲೂ ಕೆಳಮಟ್ಟಕ್ಕಿಳಿದಿದ್ದು, ಹಲವಾರು ಪ್ರದೇಶಗಳು ನೀರಿನಿಂದ ಆವೃತವಾಗಿವೆ. ಹಿಮಾಚಲ ಪ್ರದೇಶದಲ್ಲಿ ತೀವ್ರ ಕುಳಿರ್ಗಾಳಿ ಮತ್ತು ಹಿಮದಿಂದಾಗಿ ಇಬ್ಬರು ಮೃತರಾಗಿದ್ದಾರೆ.

ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿಯೂ ಅಕಾಲಿಕ ಮಳೆ ಸುರಿದಿದ್ದು, ಭಾರಿ ಬೆಳೆ ಹಾನಿಯಾಗಿರುವುದಾಗಿ ರೈತರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ರು.1ಸಾವಿರ ಕೋಟಿ ಮೌಲ್ಯದ ಬೆಳೆ ಹಾನಿ ಉಂಟಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕುಸಿತ: ದೆಹಲಿ, ಹರ್ಯಾಣ, ಚಂಡಿಗಡ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಬಹಳಷ್ಟು ಸ್ಥಳಗಳಲ್ಲಿ ಮಳೆಯಾಗಿದ್ದು, ಜಲಾವೃತವಾಗಿದೆ. ಈ ಸ್ಥಳಗಳಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಜಮ್ಮ-ಶ್ರೀನಗರ ಹೆದ್ದಾರಿ ಹಿಮದಿಂದ ಮುಚ್ಚಲ್ಪಟ್ಟಿದ್ದು, ಹಲವೆಡೆ ಹಿಮಪಾತದಿಂದ ಭೂ ಕುಸಿತ ಉಂಟಾಗಿವೆ. ಇದರಿಂದಾಗಿ ದೇಶಧ ಇತರೆಡೆಗಳ ಸಂಪರ್ಕ ಕಡಿತಗೊಂಡಿದೆ. ಇಲ್ಲಿ 15ಕ್ಕೂ ಹೆಚ್ಚು ಕಟ್ಟಡಗಳಿಗೆ ಮಳೆಯಿಂದಾಗಿ ಹಾನಿಯಾಗಿದೆ.

ಪೊಲೀಸರು ಈ ಕುರಿತಂತೆ ಮಾಹಿತಿ ನೀಡಿ, ರಸ್ತೆ ಮೇಲೆ ಹಿಮದ ತೆರವಿಗಾಗಿ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆ ಮತ್ತು ಹಿಮದಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಮಳೆ

ಅಕಾಲಿಕ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸಂಸದ ಓಂ ಬಿರ್ಲಾ, ರಾಜಸ್ಥಾನದಲ್ಲಿ ಬಿದ್ದ ಹೆಚ್ಚಿನ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ದೇವಿಂದರ್ ಹೂಡಾ, ಹರ್ಯಾಣದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT