ಆ್ಯಸಿಡ್ ದಾಳಿ 
ದೇಶ

ಆ್ಯಸಿಡ್ ದಾಳಿಗೆ ನಲುಗಿದ ನೆಟ್ ಬಾಲ್ ಆಟಗಾರ್ತಿ, ಜೀವನ್ಮರಣದ ಹೋರಾಟ

ಪಂಜಾಬಿನ ಗುರುದಾಸ್ ಪುರದಲ್ಲಿ ದುಷ್ಕರ್ಮಿಯೊಬ್ಬ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದ ನೆಟ್ ಬಾಲ್ ಆಟಗಾರ್ತಿಯ ಮೇಲೆ ಆ್ಯಸಿಡ್ ಎರಚಿದ್ದು...

ಅಮೃತಸರ(ಪಂಜಾಬ್): ಪಂಜಾಬಿನ ಗುರುದಾಸ್ ಪುರದಲ್ಲಿ ದುಷ್ಕರ್ಮಿಯೊಬ್ಬ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದ ನೆಟ್ ಬಾಲ್ ಆಟಗಾರ್ತಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಪಂಜಾಬಿನ ಗುರುದಾಸ್ ಪುರದಲ್ಲಿರುವ ತನ್ನ ಮನೆಗೆ ಈ ಯುವತಿ ಹೋಗುತ್ತಿರುವಾಗ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಮೊದಲು ಗುರುದಾಸ್ ಪುರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಾವಂತ ಯುವ ಆಟಗಾರ್ತಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಳೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಯುವತಿಯ ತಾಯಿ, ಕಳೆದ ಹಲವಾರು ದಿನಗಳಿಂದಲೂ ತಮ್ಮ ಮಗಳಿಗೆ ಬೆದರಿಕೆ ಕರೆ ಬರುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಆರೋಪಿಸಿದ್ದಾರೆ.

ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT