ಹೋಳಿ ಸಂಭ್ರಮ 
ದೇಶ

ಕರಾಚಿಯಲ್ಲಿ ಹಿಂದೂಗಳ ಹೋಳಿ ಆಚರಣೆ: ಪಾಕ್ ವಿದ್ಯಾರ್ಥಿಗಳಿಂದ ಮಾನವ ಕವಚ

ಪ್ರತಿ ವರ್ಷದಂತೆ ಪಾಕಿಸ್ತಾನದ ಕರಾಚಿಯ ವಿಶ್ವಖ್ಯಾತ ಸ್ವಾಮಿ ನಾರಾಯಣ್ ಮಂದಿರದಲ್ಲಿ ಹಿಂದೂಗಳು ವೈಭವಯುತವಾಗಿ ಹೋಳಿ ಆಚರಿಸಿದರು.

ಇಸ್ಲಾಮಾಬಾದ್: ಪ್ರತಿ ವರ್ಷದಂತೆ ಪಾಕಿಸ್ತಾನದ ಕರಾಚಿಯ ವಿಶ್ವಖ್ಯಾತ ಸ್ವಾಮಿ ನಾರಾಯಣ್ ಮಂದಿರದಲ್ಲಿ ಹಿಂದೂಗಳು ವೈಭವಯುತವಾಗಿ ಹೋಳಿ ಆಚರಿಸಿದರು.

ಹೋಳಿ ಆಚರಣೆ ಹಿನ್ನೆಲೆಯಲ್ಲಿ ಉಗ್ರರಿಂದ ಆಕ್ರಮಣಕ್ಕೆ ತುತ್ತಾಗುವ ಭಯವಿದ್ದರಿಂದ ಅಲ್ಲಿನ ವಿದ್ಯಾರ್ಥಿ ಸಂಘಟನೆ ಅಲ್ಪಸಂಖ್ಯಾತ ಸಮುದಾಯದ ಧಾರ್ಮಿಕ ಆಚರಣೆಗೆ ಬಿಗಿ ಬಂದೋಬಸ್ತ್ ವಹಿಸಿತ್ತು.

ಪಾಕಿಸ್ತಾನದ ನ್ಯಾಷನಲ್ ಸ್ಟೂಡೆಂಟ್ಸ್ ಫೆಡರೇಶನ್ ಸಂಘಟನೆಯ ವಿದ್ಯಾರ್ಥಿಗಳು ಶುಕ್ರವಾರ ಮಂದಿರ ಸುತ್ತಮುತ್ತ ಮಾನವ ಕವಚ ನಿರ್ಮಿಸಿದರು. ಈ ಮೂಲಕ, ಅಲ್ಪಸಂಖ್ಯಾತ ಸಮುದಾಯದಲ್ಲಿ ಮನೆಮಾಡಿದ್ದ ಅಂಜಿಕೆಯನ್ನು ಹೋಗಲಾಡಿಸುವ ಪ್ರಯತ್ನ ನಡೆದದ್ದು ವಿಶೇಷವಾಗಿತ್ತು.

ಪಾಕಿಸ್ತಾನದಲ್ಲಿ ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ನಾಶಗೊಳಿಸುವ ಕಾರ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಪ್ರಮಾಣ ದಿನೇದಿನೇ ಕುಸಿಯುತ್ತಿದೆ. ಜೊತೆಗೆ ಮತಾಂತರ ಭೂತ ಹಿಂದೂಗಳನ್ನು ಅದರಲ್ಲೂ ಹಿಂದೂ ಮಹಿಳೆಯರನ್ನು ಹೆಚ್ಚಾಗಿ ಕಾಡುತ್ತಿದೆ.

ಹಿಂದೂಗಳು ಬಹಿರಂಗವಾಗಿ ಧಾರ್ಮಿಕ ಆಚರಣೆ ಮಾಡಿಕೊಳ್ಳಲು ಹೆದರಬೇಕಾದ ಸ್ಥಿತಿ ಇದೆ. ಇಂಥ ಘಳಿಗೆಯಲ್ಲಿ ಅವರಿಗೆ ಸ್ಥೈರ್ಯ ತುಂಬುವ ಕೆಲಸವನ್ನ ನಾವು ಮಾಡುತ್ತಿದ್ದೇವೆ ಎಂದು ಎನ್'ಎಸ್ಎಫ್ ಸಂಘಟನೆಯ ಮುಖಂಡರು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT