ಯೋಗೇಂದ್ರ ಯಾದವ್ 
ದೇಶ

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಆಗ್ರಹ

ಆಮ್ ಆದ್ಮಿ ಪಕ್ಷದ ಆಂತರಿಕ ಕಲಹ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಪಕ್ಷದ ಸೋಲು ಬಯಸಿದ ಆರೋಪ ಎದುರಿಸುತ್ತಿರುವ...

ನವದೆಹಲಿ: ಆಮ್ ಆದ್ಮಿ ಪಕ್ಷದ ಆಂತರಿಕ ಕಲಹ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಪಕ್ಷದ ಸೋಲು ಬಯಸಿದ ಆರೋಪ ಎದುರಿಸುತ್ತಿರುವ ಹಾಗೂ ಆಪ್ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಂಡಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ಆಪ್ ಶಾಸಕರು ಆಗ್ರಹಿಸಿದ್ದಾರೆ.

ಯಾದವ್ ಹಾಗೂ ಭೂಷಣ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ಕರ್ವಾಲ್ ನಗರ ಶಾಸಕ ಕಪಿಲ್ ಮಿಶ್ರಾ ಅವರು, ಪಕ್ಷದ ತತ್ವ ಸಿದ್ಧಾತಂಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರು ಯಾರೇ ಆಗಿದ್ದರೂ ನಾವು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಹಾಗೂ ಶಾಂತಿ ಭೂಷಣ್ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದೇವೆ ಎಂದರು. ಅಲ್ಲದೆ ಆ ಪತ್ರಕ್ಕೆ ಎಎಪಿ ಶಾಸಕರಿಂದ ಒತ್ತಾಯಪೂರ್ವಕವಾಗಿ ಸಹಿ ಹಾಕಿಸಿಕೊಳ್ಳಲಾಗಿದೆ ಎಂಬುದನ್ನು ತಳ್ಳಿಹಾಕಿದ ಮಿಶ್ರಾ, ಪಕ್ಷದ ಎಲ್ಲಾ ಶಾಸಕರು ಸ್ವಇಚ್ಛೆಯಿಂದ ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

ಈ ಮಧ್ಯೆ, ಎಎಪಿ ಮಾಜಿ ಶಾಸಕ ರಾಜೇಶ್ ಜಾರ್ಜ್ ಅವರು, ಯೇಗೇಂದ್ರ ಯಾದವ್ ಅವರ ಬಗ್ಗೆ ಪಕ್ಷದಲ್ಲಿ ಬಹುತೇಕ ನಾಯಕರಿಗೆ ತೀವ್ರ ಅಸಮಾಧಾನ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT