ಯೋಗೇಂದ್ರ ಯಾದವ್ 
ದೇಶ

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಆಗ್ರಹ

ಆಮ್ ಆದ್ಮಿ ಪಕ್ಷದ ಆಂತರಿಕ ಕಲಹ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಪಕ್ಷದ ಸೋಲು ಬಯಸಿದ ಆರೋಪ ಎದುರಿಸುತ್ತಿರುವ...

ನವದೆಹಲಿ: ಆಮ್ ಆದ್ಮಿ ಪಕ್ಷದ ಆಂತರಿಕ ಕಲಹ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಪಕ್ಷದ ಸೋಲು ಬಯಸಿದ ಆರೋಪ ಎದುರಿಸುತ್ತಿರುವ ಹಾಗೂ ಆಪ್ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಂಡಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ಆಪ್ ಶಾಸಕರು ಆಗ್ರಹಿಸಿದ್ದಾರೆ.

ಯಾದವ್ ಹಾಗೂ ಭೂಷಣ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ಕರ್ವಾಲ್ ನಗರ ಶಾಸಕ ಕಪಿಲ್ ಮಿಶ್ರಾ ಅವರು, ಪಕ್ಷದ ತತ್ವ ಸಿದ್ಧಾತಂಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರು ಯಾರೇ ಆಗಿದ್ದರೂ ನಾವು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಹಾಗೂ ಶಾಂತಿ ಭೂಷಣ್ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದೇವೆ ಎಂದರು. ಅಲ್ಲದೆ ಆ ಪತ್ರಕ್ಕೆ ಎಎಪಿ ಶಾಸಕರಿಂದ ಒತ್ತಾಯಪೂರ್ವಕವಾಗಿ ಸಹಿ ಹಾಕಿಸಿಕೊಳ್ಳಲಾಗಿದೆ ಎಂಬುದನ್ನು ತಳ್ಳಿಹಾಕಿದ ಮಿಶ್ರಾ, ಪಕ್ಷದ ಎಲ್ಲಾ ಶಾಸಕರು ಸ್ವಇಚ್ಛೆಯಿಂದ ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

ಈ ಮಧ್ಯೆ, ಎಎಪಿ ಮಾಜಿ ಶಾಸಕ ರಾಜೇಶ್ ಜಾರ್ಜ್ ಅವರು, ಯೇಗೇಂದ್ರ ಯಾದವ್ ಅವರ ಬಗ್ಗೆ ಪಕ್ಷದಲ್ಲಿ ಬಹುತೇಕ ನಾಯಕರಿಗೆ ತೀವ್ರ ಅಸಮಾಧಾನ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!