ಕೆ.ಎಂ ಮಾಣಿ 
ದೇಶ

ಕೇರಳ: ವಿಪಕ್ಷಗಳ ಗದ್ದಲದ ನಡುವೆ ಬಜೆಟ್ ಮಂಡಿಸಿದ ಕೆ.ಎಂ ಮಾಣಿ

ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿರ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿವೆ.

ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿರ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿವೆ.

ಸಚಿವ ಕೆ.ಎಂ ಮಾಣಿ ವಿರುದ್ಧ ಬಾರ್ ಲೈಸೆನ್ಸ್ ಗೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿ ಅವರು ಬಜೆಟ್ ಮಂಡನೆ ಮಾಡದಂತೆ ವಿಪಕ್ಷ ಸಿಪಿಎಂ ತೀವ್ರ ಪ್ರತಿಭಟನೆ ನಡೆಸಿದೆ ಈ ನಡುವೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಸಿಪಿಎಂ ಶಾಸಕರು ಪರಸ್ಪರ ಕೈ ಕೈ ಮೀಲಾಯಿಸಿದ್ದಾರೆ.

ಬಜೆಟ್ ಮಂಡನೆಗೆ ವಿಪಕ್ಷಗಳು ಅವಕಾಶಕೊಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ಹಣಕಾಸು ಸಚಿವ ಮಾಣಿ ಅವರನ್ನು ಸುತ್ತುವರೆದರೂ ಇದೇ ವೇಳೆ ಮಾರ್ಷಲ್ ಗಳು ಸಹ ಮಾಣಿ ಅವರಿಗೆ ಭದ್ರತೆ ನೀಡಿದ್ದರಿಂದ ಮಾಣಿ ಅವರು ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದ್ದರು.

ಇದರಿಂದ ರೊಚ್ಚಿಗೆದ್ದ ಸಿಪಿಎಂ ಶಾಸಕರು ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಠಿಸಿದರು. ಕುರ್ಚಿ, ಪೀಠೋಪಕರಣ, ಕಂಪ್ಯೂಟರ್ ಗಳನ್ನು ಧ್ವಂಸಗೊಳಿಸಿದ್ದಾರೆ. ಇಲ್ಲದೆ ಸಿಪಿಎಂನ ಸಾವಿರಾರು ಕಾರ್ಯಕರ್ತರು ವಿಧಾನಸಭೆಯ ಒಳಗೂ ಹಾಗೂ ಹೊರಗೂ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಗಲಾಟೆ ಮಧ್ಯೆ ಅಸ್ವಸ್ಥಗೊಂಡ ಸಿಪಿಎಂ ಶಾಸಕ ಶಿವಂಕುಟ್ಟಿ
ಬಜೆಟ್ ಮಂಡನೆ ವೇಳೆ ಸಿಪಿಎಂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪರಿಣಾಮ ಸಿಪಿಎಂ ಶಾಸಕ ಶಿವಂಕುಟ್ಟಿ ತೀವ್ರ ಅಸ್ವಸ್ಥಗೊಂಡರು. ಇದರಿಂದಾಗಿ ವಿಧಾಸನಭೆಯಲ್ಲೇ ಶಿವಂಕುಟ್ಟಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT