ಕೆ.ಎಂ ಮಾಣಿ 
ದೇಶ

ಕೇರಳ: ವಿಪಕ್ಷಗಳ ಗದ್ದಲದ ನಡುವೆ ಬಜೆಟ್ ಮಂಡಿಸಿದ ಕೆ.ಎಂ ಮಾಣಿ

ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿರ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿವೆ.

ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿರ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿವೆ.

ಸಚಿವ ಕೆ.ಎಂ ಮಾಣಿ ವಿರುದ್ಧ ಬಾರ್ ಲೈಸೆನ್ಸ್ ಗೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿ ಅವರು ಬಜೆಟ್ ಮಂಡನೆ ಮಾಡದಂತೆ ವಿಪಕ್ಷ ಸಿಪಿಎಂ ತೀವ್ರ ಪ್ರತಿಭಟನೆ ನಡೆಸಿದೆ ಈ ನಡುವೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಸಿಪಿಎಂ ಶಾಸಕರು ಪರಸ್ಪರ ಕೈ ಕೈ ಮೀಲಾಯಿಸಿದ್ದಾರೆ.

ಬಜೆಟ್ ಮಂಡನೆಗೆ ವಿಪಕ್ಷಗಳು ಅವಕಾಶಕೊಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ಹಣಕಾಸು ಸಚಿವ ಮಾಣಿ ಅವರನ್ನು ಸುತ್ತುವರೆದರೂ ಇದೇ ವೇಳೆ ಮಾರ್ಷಲ್ ಗಳು ಸಹ ಮಾಣಿ ಅವರಿಗೆ ಭದ್ರತೆ ನೀಡಿದ್ದರಿಂದ ಮಾಣಿ ಅವರು ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದ್ದರು.

ಇದರಿಂದ ರೊಚ್ಚಿಗೆದ್ದ ಸಿಪಿಎಂ ಶಾಸಕರು ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಠಿಸಿದರು. ಕುರ್ಚಿ, ಪೀಠೋಪಕರಣ, ಕಂಪ್ಯೂಟರ್ ಗಳನ್ನು ಧ್ವಂಸಗೊಳಿಸಿದ್ದಾರೆ. ಇಲ್ಲದೆ ಸಿಪಿಎಂನ ಸಾವಿರಾರು ಕಾರ್ಯಕರ್ತರು ವಿಧಾನಸಭೆಯ ಒಳಗೂ ಹಾಗೂ ಹೊರಗೂ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಗಲಾಟೆ ಮಧ್ಯೆ ಅಸ್ವಸ್ಥಗೊಂಡ ಸಿಪಿಎಂ ಶಾಸಕ ಶಿವಂಕುಟ್ಟಿ
ಬಜೆಟ್ ಮಂಡನೆ ವೇಳೆ ಸಿಪಿಎಂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪರಿಣಾಮ ಸಿಪಿಎಂ ಶಾಸಕ ಶಿವಂಕುಟ್ಟಿ ತೀವ್ರ ಅಸ್ವಸ್ಥಗೊಂಡರು. ಇದರಿಂದಾಗಿ ವಿಧಾಸನಭೆಯಲ್ಲೇ ಶಿವಂಕುಟ್ಟಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT