ಕಾರ್ಪೊರೇಟ್ ಗೂಢಚಾರಿಕೆ 
ದೇಶ

ಹಣಕಾಸು ಸಚಿವಾಲಯಕ್ಕೂ ಗೂಢಚಾರಿಕೆ ಬಿಸಿ: ದೆಹಲಿಯ ಹಲವೆಡೆ ಸಿಬಿಐ ದಾಳಿ

ಪೆಟ್ರೋಲಿಯಂ ಸಚಿವಾಲಯವನ್ನು ಆವರಿಸಿಕೊಂಡ ಕಾರ್ಪೊರೇಟ್ ಗೂಢಚಾರಿಕೆ ಜಾಲ ಈಗ ಹಣಕಾಸು ಸಚಿವಾಲಯವನ್ನೂ ಆವರಿಸಿದೆ. ಜತೆಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಿಂದಲೂ ಪ್ರಮುಖ ದಾಖಲೆಗಳು ಸೋರಿಕೆಯಾಗಿವೆ...

ನವದೆಹಲಿ/ಮುಂಬೈ: ಪೆಟ್ರೋಲಿಯಂ ಸಚಿವಾಲಯವನ್ನು ಆವರಿಸಿಕೊಂಡ ಕಾರ್ಪೊರೇಟ್ ಗೂಢಚಾರಿಕೆ ಜಾಲ ಈಗ ಹಣಕಾಸು ಸಚಿವಾಲಯವನ್ನೂ ಆವರಿಸಿದೆ. ಜತೆಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಿಂದಲೂ ಪ್ರಮುಖ ದಾಖಲೆಗಳು ಸೋರಿಕೆಯಾಗಿವೆ.

ಈಗಾಗಲೇ ಬಜೆಟ್ ಭಾಷಣದ ಪ್ರತಿ ಸೋರಿಕೆಯಾಗಿತ್ತು ಎಂಬ ಗುಮಾನಿಯ ನಡುವೆ, ಮತ್ತೂ ಪ್ರಮುಖ ದಾಖಲೆಗಳು ಸೋರಿಕೆಯಾಗಿವೆ ಎಂದು ಹೇಳಲಾಗಿದೆ. ಈ ಘಟನೆ ಬಯಲಾಗುತ್ತಿದ್ದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಖಾಸಗಿ ಕಂಪನಿಗಳು, ಸಚಿವಾಲಯಗಳ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಕಚೇರಿ ಮೇಲೆ ದಾಳಿ ನಡೆಸಿರುವ ಕೇಂದ್ರ ತನಿಖಾ ದಳ ಸುಮಾರು ರು.60 ಲಕ್ಷ ನಗದುವಶಪಡಿಸಿಕೊಂಡಿದೆ. ಜತಗೆ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.

ಹೀಗಾಗಿ, ಈ ಪ್ರಕರಣ ಮತ್ತಷ್ಟು ಮಂದಿಯನ್ನು ಕತ್ತಲ ಕೋಣೆಗೆ ತಳ್ಳುವ ನಿರೀಕ್ಷೆ ಇದೆ. ಸಿಬಿಐ ಜತೆಗೆ ದೆಹಲಿ ಪೊಲೀಸರೂ ಕೂಡ ಗೂಢಚರ್ಯ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಧೀನ ಕಾರ್ಯದರ್ಶಿಗಳೇ: ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ಪ್ರಕಾರ ಹಣಕಾಸು ಮತ್ತು ವಾಣಿಜ್ಯ ಕೈಗಾರಿಕಾ ಸಚಿವಾಲಯದ ಅಧೀನ ಕಾರ್ಯದರ್ಶಿಗಳು (ಅಂಡರ್ ಸೆಕ್ರೆಟರಿ) ಬಹಳ ಎಚ್ಚರಿಯಿಂದಲೇ ಈ ಜಾಲದಲ್ಲಿ ತೊಡಗಿಸಿಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆ, ಪ್ರಮುಖ ನೀತಿ ನಿರ್ಧಾರಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳು ಅವರಿಗೆ ಸಿಗುತ್ತಿದ್ದವು. ಅವರು ಅದನ್ನು ಮಾರಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?